ಮನರಂಜನೆ

ಒಂದೇ ಸಂಸ್ಥೆಯ ಎರಡು ಚಿತ್ರಗಳು ಏಕಕಾಲಕ್ಕೆ ಆರಂಭ

ಕೆಲವು ವರ್ಷಗಳ ಹಿಂದೆ ರವಿಚಂದ್ರನ್‍ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ. ಒಂದೇ ದಿನ ಎರಡು ಚಿತ್ರಗಳನ್ನು ಒಟ್ಟಿಗೆ ಪ್ರಾರಂಭಿಸಿದೆ. ಆರ್‌.ಎಸ್‌.ಪಿ ಪ್ರೊಡಕ್ಷನ್ಸ್ ಹಾಗೂ ಚಿನ್ಮಯ್ ಸಿನಿ ಕ್ರಿಯೇಶನ್ಸ್ ಸಂಸ್ಥೆಗಳಡಿ ಲಕ್ಷ್ಮೀ ಹರೀಶ್‍ ಈ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.

ಈ ಚಿತ್ರಗಳಿಗೆ ‘ಆ ಈ’ ಮತ್ತು ‘ರಾಜ ದೇವ ಸಿಂಧು’ ಎಂದು ಹೆಸರಿಡಲಾಗಿದ್ದು, ಎರಡೂ ಚಿತ್ರಗಳಿಗೆ ದುರ್ಗಾ ಮೋಹನ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಎರಡೂ ಚಿತ್ರಗಳಲ್ಲಿ ಭಾರ್ಗವ್‍ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ವಿಶೇಷವೆಂದರೆ, ಈ ಎರಡೂ ಚಿತ್ರಗಳಲ್ಲಿ ಭಾರ್ಗವ್‍ ದ್ವಿಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಈ ಪೈಕಿ ‘ಅ … ಈ …’ ಕುರಿತು ಮಾತನಾಡುವ ನಿರ್ದೇಶಕ ದುರ್ಗಾ ಮೋಹನ್‍, ‘ಆ ದಿನಗಳು ಚೆನ್ನಾಗಿತ್ತು ಎಂದು ಕೆಲವರು ಹೇಳುತ್ತಾರೆ. ಕೆಲವರು ಈಗಲೇ ಚೆನ್ನಾಗಿದೆ ಎನ್ನುತ್ತಾರೆ. ಎರಡನ್ನೂ ತೆಗೆದುಕೊಂಡರೇ ಜೀವನ ಎಂದು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಕಾಶೀನಾಥ್‍ ಅವರ ಚಿತ್ರಗಳಲ್ಲಿ ಸಂದೇಶದ ಜೊತೆಗೆ ಹಾಸ್ಯವಿರುತ್ತಿತ್ತು. ಈ ಚಿತ್ರದಲ್ಲಿ ನಾವು ಆ ತರಹದ ಪ್ರಯತ್ನ ಮಾಡಿದ್ದೇವೆ. ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆಯಲಿದೆ. ಇನ್ನೊಂದು ಹಂತದಲ್ಲಿ ಬೆಂಗಳೂರು ಸುತ್ತಮುತ್ತದ ಹಳ್ಳಿಯಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ಭಾರ್ಗವ್‍ ಇಲ್ಲಿ ಅಪ್ಪ-ಮಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಡೀ ಚಿತ್ರದಲ್ಲಿ ಅವರಿಗೆ ಮೂರು ಶೇಡ್‍ಗಳಿರುವ ಪಾತ್ರವಿದೆ. ಒಬ್ಬ ಕಾಲೇಜು ಹುಡುಗನಿಂದ 50 ವರ್ಷದ ವಯಸ್ಸಿನವರೆಗೂ ನಟಿಸುತ್ತಿದ್ದಾರೆ. ಜೊತೆಗೆ ಶ್ವೇತಾ, ಮೊನಿಕಾ, ಚಾವಿ, ಆರಾ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್‍ ಮತ್ತು ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ’ ಎಂದರು.

ಇನ್ನು, ‘ರಾಜ ದೇವ ಸಿಂಧು’ ಬಗ್ಗೆ ಮಾತನಾಡುವ ದುರ್ಗಾ ಮೋಹನ್‍, ‘ಕರ್ನಾಟಕದಲ್ಲಿ ಮಹಾರಾಜರು ಎಂದರೆ ನಮಗೆ ಮೊದಲು ನೆನಪಿಗೆ ಬರುವುದು ಕೃಷ್ಣದೇವರಾಯರು. ಅವರು ಮಾಡಿದ ಕೆಲಸಗಳು, ಸಾಧನೆಗಳು ನಮಗೆಲ್ಲಾ ಸ್ಫೂರ್ತಿಯಾಗಿವೆ. ಅವೆಲ್ಲವನ್ನೂ ಇಟ್ಟುಕೊಂಡು ಕಾಲ್ಪನಿಕ ಕಥೆ ಹೆಣೆದಿದ್ದೇವೆ. ಈ ಶೀರ್ಷಿಕೆಯಲ್ಲಿ ಮೂರು ಹೆಸರುಗಳಿವೆ. ರಾಜ ಎನ್ನುವವನು ಈಗಿನವನು. ಡೆಲಿವರಿ ಬಾಯ್‍ ಆಗಿರುತ್ತಾನೆ. ದೇವರಾಯ ಎಂಬುದು ಫ್ಲಾಶ್‍ಬ್ಯಾಕ್‍ನಲ್ಲಿ ಬರುವ ಒಂದು ಪಾತ್ರ. ಸಿಂಧು ಎನ್ನುವುದು ಸಿಂಧೂಜಾ ಎಂಬ ಪಾತ್ರ. ಮೂರೂ ಸೇರಿ ‘ರಾಜ ದೇವ ಸಿಂಧು’ ಎಂದು ಹೆಸರಿಟ್ಟಿದ್ದೇವೆ. ಇದೊಂದು ಕಾಲ್ಪನಿಕ ಚಿತ್ರ. ಏಳು ಜನ್ಮಗಳಿಗೊಮ್ಮೆ ಮನುಷ್ಯ ಜನ್ಮ ಬರುತ್ತದೆ ಎಂಬ ನಂಬಿಕೆ ಇದೆ. ಹಾಗಿರುವಾಗ, ಏಳು ಜನ್ಮಗಳ ಹಿಂದೆ ನಾವೇನು ಆಗಿರಬಹುದು ಎಂದು ಕಲ್ಪನೆಯೊಂದಿಗೆ ಮಾಡಿದ ಚಿತ್ರ. ಆಗಿನ ಜನ್ಮದಲ್ಲಿ ಆಗುವ ಸನ್ನಿವೇಶಗಳು ಪುನಃ ಈಗ ರಿಪೀಟ್‍ ಆಗುತ್ತದಾ? ಅಲ್ಲಿ ಒಳ್ಳೆಯವನಾಗಿದ್ದವನು ಇಲ್ಲಿ ಕೆಟ್ಟವನಾಗಿರುತ್ತಾನಾ? ಇಲ್ಲಿ ಇವನು ಏನಾಗಿರುತ್ತಾನೆ? ಎಂಬ ಅಂಶಗಳನ್ನಿಟ್ಟುಕೊಂಡು ಕಥೆ ಮಾಡಿದ್ದೇವೆ’ ಎಂದರು.

ಭಾರ್ಗವ್‍ ಮಾತನಾಡಿ, ‘’ಆ … ಈ …’ ನನ್ನ 7ನೇ ಚಿತ್ರ. ಈ ಚಿತ್ರದಲ್ಲಿ ಸವಾಲಿನ ಪಾತ್ರವಿದೆ. ಮೊದಲ ಬಾರಿಗೆ ದ್ವಿಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಚಿತ್ರದಲ್ಲಿ ನಾಲ್ಕು ರೀತಿಯ ಪ್ರೀತಿ ಇದೆ. ಪ್ರತಿಯೊಬ್ಬರಿಗೂ ಒಂದು ಪಾಠವಿದೆ. ನವೆಂಬರ್‍ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರಕ್ಕೆ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಇನ್ನು, ನಿರ್ದೇಶಕರು ‘ರಾಜ ದೇವ ಸಿಂಧು’ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಇದು ಮುಂದಿನ ಜನವರಿಯಲ್ಲಿ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಮಂಗಳೂರು, ಮಡಿಕೇರಿ ಮುಂತಾದ ಕಡೆ ಚಿತ್ರೀಕರಣ ಮಾಡಲಾಗುತ್ತದೆ. ಇದೊಂದು ಸವಾಲಿನ ಪಾತ್ರ. ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದೇನೆ. ಈ ಚಿತ್ರದಲ್ಲೂ ದ್ವಿಪಾತ್ರಗಳಿವೆ. ಇದೊಂದು ಸೋಷಿಯಲ್‍ ಫ್ಯಾಂಟಸಿ ಚಿತ್ರ. ಇಂಥದ್ದೊಂದು ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ’ ಎಂದರು.

ಭೂಮಿಕಾ

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

5 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

5 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

5 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

6 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

6 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

6 hours ago