ಮನರಂಜನೆ

‘ಸ್ಮೈಲ್‍ ಗುರು’ ರಕ್ಷಿತ್‍ಗೆ ನಾಯಕಿಯಾದ ‘ನೆನಪಿರಲಿ’ ಪ್ರೇಮ್‍ ಮಗಳು

ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್‍’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್‍, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು ಹೇಳಿದ್ದರು.

ಈಗ ಕೊನೆಗೂ ಅಮೃತಾಗೆ ಹೊಸದೊಂದು ಚಿತ್ರ ಸಿಕ್ಕಿದೆ. ‘ಸ್ಮೈಲ್‍ ಗುರು’ ಎಂಬ ಕಿರುಚಿತ್ರ ಮಾಡಿ, ಆ ನಂತರ ‘ಕನ್ನಡತಿ’ ಧಾರಾವಾಹಿಯ ಮೂಲಕ ಜನಪ್ರಿಯರಾಗಿದ್ದ ರಕ್ಷಿತ್‍, ಈಗ ಹೀರೋ ಆಗಿರುವುದು, ‘ಆಕಾಶ್’, ‘ಅರಸು’, ‘ಮೆರವಣಿಗೆ’ಯಂತಹ ಯಶಸ್ವಿ ಚಿತ್ರಗಳನ್ನು ಕೊಟ್ಟ ಮಹೇಶ್‍ ಬಾಬು ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈಗ ಆ ಚಿತ್ರಕ್ಕೆ ಅಮೃತಾ ಪ್ರೇಮ್‍ ಆಯ್ಕೆಯಾಗಿದ್ದಾರೆ.

ಈ ಚಿತ್ರಕ್ಕೆ ಇಬ್ಬರು ನಾಯಕಿಯರು ಮತ್ತು ಈಗಾಗಲೇ ‘ವೀರ ಮದಕರಿ’ ಚಿತ್ರದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದ ಜೆರುಷಾ ನಾಯಕಿ ಎಂಬ ಸುದ್ದಿ ಬಂದಿತ್ತು. ಿನ್ನೊಬ್ಬ ನಾಯಕಿಯ ಹುಡುಕಾಟದಲ್ಲಿದ್ದ ಮಹೇಶ್‍ ಬಾಬುಗೆ ಅಮೃತಾ ಸಿಕ್ಕಿದ್ದಾರೆ.

ಮಹೇಶ್‍ ಬಾಬು ನಿರ್ದೇಶನದ ‘ಅಪರೂಪ’ ಕಳೆದ ವರ್ಷ ಬಿಡುಗಡೆಯಾಗಿತ್ತು. ಹೊಸಬರ ಜೊತೆಗೆ ಹೆಚ್ಚಾಗಿಯೇ ಸಿನಿಮಾ ಮಾಡುತ್ತಿರುವ ಮಹೇಶ್ ಬಾಬು, ಆ ಚಿತ್ರದ ನಂತರ ರಕ್ಷಿತ್‍ಗೆ ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದರು. ಆ ಚಿತ್ರ ಕೆಲವು ತಿಂಗಳುಗಳ ಹಿಂದೆ ಸೆಟ್ಟೇರಿತ್ತು. ವಿಶೇಷವೆಂದರೆ, ‘ನೆನಪಿರಲಿ’ ಪ್ರೇಮ್‍ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಕೋರಿದ್ದರು. ಈಗ ಅವರ ಮಗಳು ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಮಹೇಶ್‍ ಬಾಬು ಚಿತ್ರಗಳೆಂದರೆ ಪ್ರೇಮಕಥೆಗಳೇ ಆಗಿರುತ್ತವೆ ಎಂಬುದು ಇಷ್ಟೊತ್ತಿಗೆ ಪ್ರೇಕ್ಷಕರಿಗೆ ಖಾತ್ರಿಯಾಗಿಬಿಟ್ಟಿದೆ. ಈ ಚಿತ್ರ ಸಹ ಅದೇ ಜಾನರ್‍ನ ಒಂದು ಚಿತ್ರ. ಎಂ.ಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸ್ಮೈಲ್ ಗುರು ರಕ್ಷಿತ್ ಅವರೇ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ.

ಭೂಮಿಕಾ

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

6 mins ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

3 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

3 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

4 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

4 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

4 hours ago