ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು ಹೇಳಿದ್ದರು.
ಈಗ ಕೊನೆಗೂ ಅಮೃತಾಗೆ ಹೊಸದೊಂದು ಚಿತ್ರ ಸಿಕ್ಕಿದೆ. ‘ಸ್ಮೈಲ್ ಗುರು’ ಎಂಬ ಕಿರುಚಿತ್ರ ಮಾಡಿ, ಆ ನಂತರ ‘ಕನ್ನಡತಿ’ ಧಾರಾವಾಹಿಯ ಮೂಲಕ ಜನಪ್ರಿಯರಾಗಿದ್ದ ರಕ್ಷಿತ್, ಈಗ ಹೀರೋ ಆಗಿರುವುದು, ‘ಆಕಾಶ್’, ‘ಅರಸು’, ‘ಮೆರವಣಿಗೆ’ಯಂತಹ ಯಶಸ್ವಿ ಚಿತ್ರಗಳನ್ನು ಕೊಟ್ಟ ಮಹೇಶ್ ಬಾಬು ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈಗ ಆ ಚಿತ್ರಕ್ಕೆ ಅಮೃತಾ ಪ್ರೇಮ್ ಆಯ್ಕೆಯಾಗಿದ್ದಾರೆ.
ಈ ಚಿತ್ರಕ್ಕೆ ಇಬ್ಬರು ನಾಯಕಿಯರು ಮತ್ತು ಈಗಾಗಲೇ ‘ವೀರ ಮದಕರಿ’ ಚಿತ್ರದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದ ಜೆರುಷಾ ನಾಯಕಿ ಎಂಬ ಸುದ್ದಿ ಬಂದಿತ್ತು. ಿನ್ನೊಬ್ಬ ನಾಯಕಿಯ ಹುಡುಕಾಟದಲ್ಲಿದ್ದ ಮಹೇಶ್ ಬಾಬುಗೆ ಅಮೃತಾ ಸಿಕ್ಕಿದ್ದಾರೆ.
ಮಹೇಶ್ ಬಾಬು ನಿರ್ದೇಶನದ ‘ಅಪರೂಪ’ ಕಳೆದ ವರ್ಷ ಬಿಡುಗಡೆಯಾಗಿತ್ತು. ಹೊಸಬರ ಜೊತೆಗೆ ಹೆಚ್ಚಾಗಿಯೇ ಸಿನಿಮಾ ಮಾಡುತ್ತಿರುವ ಮಹೇಶ್ ಬಾಬು, ಆ ಚಿತ್ರದ ನಂತರ ರಕ್ಷಿತ್ಗೆ ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದರು. ಆ ಚಿತ್ರ ಕೆಲವು ತಿಂಗಳುಗಳ ಹಿಂದೆ ಸೆಟ್ಟೇರಿತ್ತು. ವಿಶೇಷವೆಂದರೆ, ‘ನೆನಪಿರಲಿ’ ಪ್ರೇಮ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಕೋರಿದ್ದರು. ಈಗ ಅವರ ಮಗಳು ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಮಹೇಶ್ ಬಾಬು ಚಿತ್ರಗಳೆಂದರೆ ಪ್ರೇಮಕಥೆಗಳೇ ಆಗಿರುತ್ತವೆ ಎಂಬುದು ಇಷ್ಟೊತ್ತಿಗೆ ಪ್ರೇಕ್ಷಕರಿಗೆ ಖಾತ್ರಿಯಾಗಿಬಿಟ್ಟಿದೆ. ಈ ಚಿತ್ರ ಸಹ ಅದೇ ಜಾನರ್ನ ಒಂದು ಚಿತ್ರ. ಎಂ.ಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸ್ಮೈಲ್ ಗುರು ರಕ್ಷಿತ್ ಅವರೇ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…