ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು ಹೇಳಿದ್ದರು.
ಈಗ ಕೊನೆಗೂ ಅಮೃತಾಗೆ ಹೊಸದೊಂದು ಚಿತ್ರ ಸಿಕ್ಕಿದೆ. ‘ಸ್ಮೈಲ್ ಗುರು’ ಎಂಬ ಕಿರುಚಿತ್ರ ಮಾಡಿ, ಆ ನಂತರ ‘ಕನ್ನಡತಿ’ ಧಾರಾವಾಹಿಯ ಮೂಲಕ ಜನಪ್ರಿಯರಾಗಿದ್ದ ರಕ್ಷಿತ್, ಈಗ ಹೀರೋ ಆಗಿರುವುದು, ‘ಆಕಾಶ್’, ‘ಅರಸು’, ‘ಮೆರವಣಿಗೆ’ಯಂತಹ ಯಶಸ್ವಿ ಚಿತ್ರಗಳನ್ನು ಕೊಟ್ಟ ಮಹೇಶ್ ಬಾಬು ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈಗ ಆ ಚಿತ್ರಕ್ಕೆ ಅಮೃತಾ ಪ್ರೇಮ್ ಆಯ್ಕೆಯಾಗಿದ್ದಾರೆ.
ಈ ಚಿತ್ರಕ್ಕೆ ಇಬ್ಬರು ನಾಯಕಿಯರು ಮತ್ತು ಈಗಾಗಲೇ ‘ವೀರ ಮದಕರಿ’ ಚಿತ್ರದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದ ಜೆರುಷಾ ನಾಯಕಿ ಎಂಬ ಸುದ್ದಿ ಬಂದಿತ್ತು. ಿನ್ನೊಬ್ಬ ನಾಯಕಿಯ ಹುಡುಕಾಟದಲ್ಲಿದ್ದ ಮಹೇಶ್ ಬಾಬುಗೆ ಅಮೃತಾ ಸಿಕ್ಕಿದ್ದಾರೆ.
ಮಹೇಶ್ ಬಾಬು ನಿರ್ದೇಶನದ ‘ಅಪರೂಪ’ ಕಳೆದ ವರ್ಷ ಬಿಡುಗಡೆಯಾಗಿತ್ತು. ಹೊಸಬರ ಜೊತೆಗೆ ಹೆಚ್ಚಾಗಿಯೇ ಸಿನಿಮಾ ಮಾಡುತ್ತಿರುವ ಮಹೇಶ್ ಬಾಬು, ಆ ಚಿತ್ರದ ನಂತರ ರಕ್ಷಿತ್ಗೆ ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದರು. ಆ ಚಿತ್ರ ಕೆಲವು ತಿಂಗಳುಗಳ ಹಿಂದೆ ಸೆಟ್ಟೇರಿತ್ತು. ವಿಶೇಷವೆಂದರೆ, ‘ನೆನಪಿರಲಿ’ ಪ್ರೇಮ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಕೋರಿದ್ದರು. ಈಗ ಅವರ ಮಗಳು ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಮಹೇಶ್ ಬಾಬು ಚಿತ್ರಗಳೆಂದರೆ ಪ್ರೇಮಕಥೆಗಳೇ ಆಗಿರುತ್ತವೆ ಎಂಬುದು ಇಷ್ಟೊತ್ತಿಗೆ ಪ್ರೇಕ್ಷಕರಿಗೆ ಖಾತ್ರಿಯಾಗಿಬಿಟ್ಟಿದೆ. ಈ ಚಿತ್ರ ಸಹ ಅದೇ ಜಾನರ್ನ ಒಂದು ಚಿತ್ರ. ಎಂ.ಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸ್ಮೈಲ್ ಗುರು ರಕ್ಷಿತ್ ಅವರೇ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…