ಮನರಂಜನೆ

ಲೈವ್‌ ಕಾನ್ಸರ್ಟ್‌ ವೇಳೆ ಸೋನು ನಿಗಮ್‌ಗೆ ಬೆನ್ನು ನೋವು: ಆಸ್ಪತ್ರೆಗೆ ದಾಖಲು

ಪುಣೆ: ಖ್ಯಾತ ಗಾಯಕ ಸೋನು ನಿಗಮ್‌ ಪುಣೆಯಲ್ಲಿ ಸಂಗೀತ ಕಾರ್ಯಕ್ರಮದ ಲೈವ್‌ ಕಾನ್ಸರ್ಟ್‌ ನಡೆಸಿಕೊಡುವ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಸೋಷಿಯಲ್‌ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್‌ ಹಾಕಿದ್ದಾರೆ.

ಸೋನು ನಿಗಮ್‌ ಪೋಸ್ಟ್‌ನಲ್ಲಿ, ಪುಣೆಯ ಸಂಗೀತ ಕಾರ್ಯಕ್ರಮದಲ್ಲಿ ಹಾಡು ಹೇಳುತ್ತಾ ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಈ ವೇಳೆ ಬೆನ್ನು ನೋವು ಕಾಣಿಸಿಕೊಂಡಿದೆ. ಆದರೆ, ಹೇಗೋ ಆ ಸಂದರ್ಭ ನಿಭಾಯಿಸಿ ಸಂಗೀತ ಕಾರ್ಯಕ್ರಮ ಮುಗಿಸಿ ನಂತರ ಆಸ್ಪತ್ರೆಗೆ ದಾಖಲಾದೆ ಎಂದು ತಿಳಿಸಿದ್ದಾರೆ.

ಅಭಿಮಾನಿಗಳು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟವಿಲ್ಲ ಆದ ಕಾರಣ ನಾನು ಸಂಗೀತ ಕಾರ್ಯಕ್ರಮವನ್ನು ಪೂರ್ಣವಾಗಿ ಮುಗಿಸಿದೆ. ಈ ಕಾರ್ಯಕ್ರಮದಲ್ಲಿ ಸ್ವಲ್ಪ ಅಲ್ಲಾಡಿದರೂ ನೋವು ಹೆಚ್ಚಾಗುತ್ತಿತ್ತು. ಆ ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು ಎಂದು ಕ್ಯಾಪ್ಸನ್ ನೀಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ಬಹುಭಾಷಾ ಖ್ಯಾತ ಗಾಯಕರಾಗಿರುವ ಸೋನು ನಿಗಮ್‌ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ಹಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago