ಬೆಂಗಳೂರು: ಕಾನೂನು ಬಾಹಿರವಾಗಿ ಮಗುವೊಂದನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಿ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಇನ್ಸ್ಟಾ ಗ್ರಾಂ ನಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ಸೋನು ಗೌಡ ಸದಾ ಚರ್ಚೆಯಲ್ಲಿರುವ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಸಿಲುಕಿದ್ದ ಇವರಿಗೆ ಮಗು ದತ್ತು ಪ್ರಕರಣ ಸಂಕಷ್ಟ ತಂದೊಡ್ಡಿದೆ.
ಸೋನು ಶ್ರೀನಿವಾಸ್ ಗೌಡ ಅವರು ರಾಯಚೂರು ಮೂಲದ ಬಾಲಕಿಯನ್ನು ದತ್ತು ಪಡೆದಿದ್ದರು. ಆ ಬಾಲಕಿಗೆ ಏಳು ವರ್ಷ. ತಂದೆ-ತಾಯಿಯ ಒಪ್ಪಿಗೆ ಪಡೆದು ಸೋನು ಮಗುವನ್ನು ದತ್ತು ಪಡೆದಿದ್ದರು. ಇಲ್ಲಿ ಯಾವುದೇ ನಿಯಮಗಳೂ ಫಾಲೋ ಆಗಿರಲಿಲ್ಲ. ಇದನ್ನು ತಿಳಿದ ಬಳಿಕ ಸೋನು ವಿರುದ್ಧ ಕೇಸ್ ದಾಖಲಾಯ್ತು. ಆ ಬಳಿಕ ಪೊಲೀಸರು ಎಫ್ಐಆರ್ ದಾಖಲಿಸಿ ಸೋನು ಅವರನ್ನು ಬಂಧಿಸಿ, ಬಳಿಕ ಆಕೆಯನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು.
ಮಗು ದತ್ತು ಪಡೆಯುವ ವಿಷಯದಲ್ಲಿ ಯಾವುದೇ ಕಾನೂನಿನ ಪಾಲನೆಯಾಗಿಲ್ಲ ಎಂಬ ಮಾಹಿತಿ ಮನಗಂಡು ಇಲ್ಲಿನ ಸಿಜೆಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಲಿದೆ.
ಸದ್ಯ ಸೋನು ಶ್ರೀನಿವಾಸ ಗೌಡ ಅವರು ಜಾಮೀನಿಗಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…