ಮನರಂಜನೆ

Soon, sooner, soonest ಅಂದರೆ ಯಾವಾಗ? ಸುದೀಪ್‍ ಅಭಿಮಾನಿಗಳ ಪ್ರಶ್ನೆ

ಸುದೀಪ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಮ್ಯಾಕ್ಸ್’ನ ಟೀಸರ್ ಮಂಗಳವಾರ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ. ಈ ಮಧ್ಯೆ, ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯನ್ನು ಸುದೀಪ್‍ ಅಭಿಮಾನಿಗಳು ಕೇಳುತ್ತಿದ್ದಾರೆ.

‘ಮ್ಯಾಕ್ಸ್’ ಕಳೆದ ವರ್ಷವೇ ಪ್ರಾರಂಭವಾದ ಚಿತ್ರ. ಎಲ್ಲಾ ಅಂದುಕೊಂಡಂತೆ ಆದರೆ, ಕಳೆದ ವರ್ಷ ಡಿಸೆಂಬರ್‍ನಲ್ಲೇ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ಸುದೀಪ್ ‍ಹೇಳಿಕೊಂಡಿದ್ದರು. ಆದರೆ, ಅದಾಗಿ ಏಳು ತಿಂಗಳಾದರೂ ಬಿಡುಗಡೆ ಆಗಿಲ್ಲ. ಇನ್ನು, ಚಿತ್ರದ ಬಗ್ಗೆ ಏನಾದರೂ ಮಾಹಿತಿ ಕೊಡಿ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದರು. ಆದರೆ, ಚಿತ್ರತಂಡದವರಿಂದ ಯಾವುದೇ ಅಪ್‍ಡೇಟ್‍ ಇರಲಿಲ್ಲ.

ಹೀಗಿರುವಾಗಲೇ ಮಂಗಳವಾರ ಮಧ್ಯಾಹ್ನ, ‘ಮ್ಯಾಕ್ಸ್’ ಚಿತ್ರದ ಟೀಸರ್‍ ಬಿಡುಗಡೆ ಮಾಡುವ ಮೂಲಕ ಚಿತ್ರತಂಡದವರು ಸುದೀಪ್‍ ಅಭಿಮಾನಿಗಳನ್ನು ಖುಷಿಪಡಿಸಿದ್ದಾರೆ. ಇದೊಂದು ಪಕ್ಕಾ ಆ್ಯಕ್ಷನ್‍ ಚಿತ್ರವಾಗಿದ್ದು, ಹಲವು ಸಾಹಸಮಯ ದೃಶ್ಯಗಳಿವೆ. ಇನ್ನು, ಟೀಸರ್‍ನ ಕೊನೆಯಲ್ಲಿ ಚಿತ್ರದ ಬಿಡುಗಡೆ Soon, Sooner, Soonest ಎಂದು ಹೇಳಲಾಗಿದೆ.

ಎಲ್ಲಾ ಸರಿ, Soon, Sooner, Soonest ಎಂದರೆ ಯಾವಾಗ? ಎಂಬ ಪ್ರಶ್ನೆ ಸುದೀಪ್‍ ಅಭಿಮಾನಿಗಳದ್ದು. ಕೆಲವು ದಿನಗಳ ಹಿಂದೆ ಆಗಸ್ಟ್ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸುದೀಪ್‍ ಹೇಳಿಕೊಂಡಿದ್ದರು. ಆದರೆ, ಜುಲೈ ತಿಂಗಳು ಅರ್ಧ ಮುಗಿದರೂ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಘೋಷಿಸಿಲ್ಲ. ಹಾಗಾಗಿ, ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದಾರೆ. ಸದ್ಯಕ್ಕೆ ಚಿತ್ರತಂಡದಿಂದ ಯಾವುದೇ ಉತ್ತರ ಇಲ್ಲ.

‘ಮ್ಯಾಕ್ಸ್’ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್. ಧನು, ತಮ್ಮ ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ವಿಜಯ್‍ ಕಾರ್ತಿಕೇಯ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್‍ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಮತ್ತು ಶೇಖರ್‍ ಚಂದ್ರು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

13 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

14 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

14 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

14 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

14 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

15 hours ago