ಮನರಂಜನೆ

Soon, sooner, soonest ಅಂದರೆ ಯಾವಾಗ? ಸುದೀಪ್‍ ಅಭಿಮಾನಿಗಳ ಪ್ರಶ್ನೆ

ಸುದೀಪ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಮ್ಯಾಕ್ಸ್’ನ ಟೀಸರ್ ಮಂಗಳವಾರ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ. ಈ ಮಧ್ಯೆ, ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯನ್ನು ಸುದೀಪ್‍ ಅಭಿಮಾನಿಗಳು ಕೇಳುತ್ತಿದ್ದಾರೆ.

‘ಮ್ಯಾಕ್ಸ್’ ಕಳೆದ ವರ್ಷವೇ ಪ್ರಾರಂಭವಾದ ಚಿತ್ರ. ಎಲ್ಲಾ ಅಂದುಕೊಂಡಂತೆ ಆದರೆ, ಕಳೆದ ವರ್ಷ ಡಿಸೆಂಬರ್‍ನಲ್ಲೇ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ಸುದೀಪ್ ‍ಹೇಳಿಕೊಂಡಿದ್ದರು. ಆದರೆ, ಅದಾಗಿ ಏಳು ತಿಂಗಳಾದರೂ ಬಿಡುಗಡೆ ಆಗಿಲ್ಲ. ಇನ್ನು, ಚಿತ್ರದ ಬಗ್ಗೆ ಏನಾದರೂ ಮಾಹಿತಿ ಕೊಡಿ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದರು. ಆದರೆ, ಚಿತ್ರತಂಡದವರಿಂದ ಯಾವುದೇ ಅಪ್‍ಡೇಟ್‍ ಇರಲಿಲ್ಲ.

ಹೀಗಿರುವಾಗಲೇ ಮಂಗಳವಾರ ಮಧ್ಯಾಹ್ನ, ‘ಮ್ಯಾಕ್ಸ್’ ಚಿತ್ರದ ಟೀಸರ್‍ ಬಿಡುಗಡೆ ಮಾಡುವ ಮೂಲಕ ಚಿತ್ರತಂಡದವರು ಸುದೀಪ್‍ ಅಭಿಮಾನಿಗಳನ್ನು ಖುಷಿಪಡಿಸಿದ್ದಾರೆ. ಇದೊಂದು ಪಕ್ಕಾ ಆ್ಯಕ್ಷನ್‍ ಚಿತ್ರವಾಗಿದ್ದು, ಹಲವು ಸಾಹಸಮಯ ದೃಶ್ಯಗಳಿವೆ. ಇನ್ನು, ಟೀಸರ್‍ನ ಕೊನೆಯಲ್ಲಿ ಚಿತ್ರದ ಬಿಡುಗಡೆ Soon, Sooner, Soonest ಎಂದು ಹೇಳಲಾಗಿದೆ.

ಎಲ್ಲಾ ಸರಿ, Soon, Sooner, Soonest ಎಂದರೆ ಯಾವಾಗ? ಎಂಬ ಪ್ರಶ್ನೆ ಸುದೀಪ್‍ ಅಭಿಮಾನಿಗಳದ್ದು. ಕೆಲವು ದಿನಗಳ ಹಿಂದೆ ಆಗಸ್ಟ್ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸುದೀಪ್‍ ಹೇಳಿಕೊಂಡಿದ್ದರು. ಆದರೆ, ಜುಲೈ ತಿಂಗಳು ಅರ್ಧ ಮುಗಿದರೂ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಘೋಷಿಸಿಲ್ಲ. ಹಾಗಾಗಿ, ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದಾರೆ. ಸದ್ಯಕ್ಕೆ ಚಿತ್ರತಂಡದಿಂದ ಯಾವುದೇ ಉತ್ತರ ಇಲ್ಲ.

‘ಮ್ಯಾಕ್ಸ್’ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್. ಧನು, ತಮ್ಮ ವಿ‌ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ವಿಜಯ್‍ ಕಾರ್ತಿಕೇಯ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್‍ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಮತ್ತು ಶೇಖರ್‍ ಚಂದ್ರು ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

6 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago