ಮನರಂಜನೆ

ʼಸ್ಪಾರ್ಕ್‌ʼ ಪೋಸ್ಟರ್‌ ವಿವಾದಕ್ಕೆ ತೆರೆ: ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ಮಹಾಂತೇಶ್‍

‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್‍ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್‍ ಹಂದ್ರಾಳ್‍ ಕ್ಷಮೆ ಕೇಳಿದ್ದು, ಪ್ರಕರಣ ತಣ್ಣಗಾಗಿದೆ.

ಶುಕ್ರವಾರ, ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಸ್ಪಾರ್ಕ್’ ಎಂಬ ಚಿತ್ರದಲ್ಲಿನ ಅವರ ಪೋಸ್ಟರ್‍ ಬಿಡುಗಡೆಯಾಗಿತ್ತು. ಈ ಪೋಸ್ಟರ್‍ನಲ್ಲಿ ಪ್ರೇಮ್‍, ಬೆಂಕಿ ಅಂಟಿರುವ ಭಿತ್ತಿಪತ್ರದಿಂದ ತಮ್ಮ ಸಿಗಾರ್‍ ಹಚ್ಚುತ್ತಿರುವ ದೃಶ್ಯವಿದೆ. ಈ ಭಿತ್ತಿಪತ್ರದಲ್ಲಿ ರಮೇಶ್‍ ಇಂದಿರಾ ಅವರ ಭಾವಚಿತ್ರವಿದ್ದು, ತಮ್ಮ ಭಾವಚಿತ್ರವನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವುದರಕ್ಕೆ ಚಿತ್ರತಂಡದ ಬಗ್ಗೆ ರಮೇಶ್ ಇಂದಿರಾ ಬೇಸರಗೊಂಡಿದ್ದರು. ಅಷ್ಟೇ ಅಲ್ಲ, ಚಿತ್ರತಂಡ ಮತ್ತು ಪ್ರೇಮ್‍ ವಿರುದ್ಧ ಕಾನೂನು ಕ್ರಮ ತೆಗೆದಕೊಳ್ಳುವುದಾಗಿ ಹೇಳಿದ್ದರು.

‘ಸ್ಪಾರ್ಕ್‌’ ಚಿತ್ರವನ್ನು ಮಹಾಂತೇಶ್ ಹಂದ್ರಾಳ್ ನಿರ್ದೇಶಿಸುತ್ತಿದ್ದು, ಇದು ಅವರಿಗೆ ನಿರ್ದೇಶಕರಾಗಿ ಮೊದಲ ಚಿತ್ರ. ಈ ಕುರಿತು ಮಾತನಾಡಿರುವ ಅವರು, ‘ರಮೇಶ್‌ ಇಂದಿರಾ ಅವರಿಂದ ಅನುಮತಿ ಪಡೆದು ಅವರ ಫೋಟೋ ಬಳಸಿಕೊಳ್ಳಬೇಕಿತ್ತು. ಮ್ಯಾನೇಜರ್‌ ಹೇಳಿದ್ದಾರೆಂದು ಫೋಟೋ ಬಳಸಲಾಗಿದೆ. ಒಂದು ಸಣ್ಣ ಗೊಂದಲದಿಂದ ತಪ್ಪಾಗಿದೆ. ಈ ಕುರಿತು ರಮೇಶ‍್ ಇಂದಿರಾ ಬಳಿ ಕ್ಷಮೆ ಕೇಳಿದ್ದೇನೆ. ‘ಮೊದಲು ನೀವು ಒಮ್ಮೆ ತಿಳಿಸಬೇಕಿತ್ತು. ಆದರೆ, ಅದು ನಡೆದು ಹೋಗಿದೆ. ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಿ’ ಎಂದು ರಮೇಶ್‌ ಇಂದಿರಾ ಹೇಳಿದ್ದಾರೆ’ ಎಂದು ಮಹಾಂತೇಶ್‍ ಹೇಳಿಕೊಂಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್‌’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಮಹಾಂತೇಶ್‍ ಹಂದ್ರಾಳ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಮತ್ತು ರಚನಾ ಇಂದರ್‍ ನಟಿಸುತ್ತಿರುವ ‘ಸ್ಪಾರ್ಕ್’ ಚಿತ್ರದಲ್ಲಿ ಪ್ರೇಮ್‍ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | 26 ಜನವರಿ,  ಶನಿವಾರ

42 seconds ago

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

12 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

12 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

13 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

14 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

14 hours ago