ಮನರಂಜನೆ

ʼಸ್ಪಾರ್ಕ್‌ʼ ಪೋಸ್ಟರ್‌ ವಿವಾದಕ್ಕೆ ತೆರೆ: ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ಮಹಾಂತೇಶ್‍

‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್‍ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್‍ ಹಂದ್ರಾಳ್‍ ಕ್ಷಮೆ ಕೇಳಿದ್ದು, ಪ್ರಕರಣ ತಣ್ಣಗಾಗಿದೆ.

ಶುಕ್ರವಾರ, ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಸ್ಪಾರ್ಕ್’ ಎಂಬ ಚಿತ್ರದಲ್ಲಿನ ಅವರ ಪೋಸ್ಟರ್‍ ಬಿಡುಗಡೆಯಾಗಿತ್ತು. ಈ ಪೋಸ್ಟರ್‍ನಲ್ಲಿ ಪ್ರೇಮ್‍, ಬೆಂಕಿ ಅಂಟಿರುವ ಭಿತ್ತಿಪತ್ರದಿಂದ ತಮ್ಮ ಸಿಗಾರ್‍ ಹಚ್ಚುತ್ತಿರುವ ದೃಶ್ಯವಿದೆ. ಈ ಭಿತ್ತಿಪತ್ರದಲ್ಲಿ ರಮೇಶ್‍ ಇಂದಿರಾ ಅವರ ಭಾವಚಿತ್ರವಿದ್ದು, ತಮ್ಮ ಭಾವಚಿತ್ರವನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವುದರಕ್ಕೆ ಚಿತ್ರತಂಡದ ಬಗ್ಗೆ ರಮೇಶ್ ಇಂದಿರಾ ಬೇಸರಗೊಂಡಿದ್ದರು. ಅಷ್ಟೇ ಅಲ್ಲ, ಚಿತ್ರತಂಡ ಮತ್ತು ಪ್ರೇಮ್‍ ವಿರುದ್ಧ ಕಾನೂನು ಕ್ರಮ ತೆಗೆದಕೊಳ್ಳುವುದಾಗಿ ಹೇಳಿದ್ದರು.

‘ಸ್ಪಾರ್ಕ್‌’ ಚಿತ್ರವನ್ನು ಮಹಾಂತೇಶ್ ಹಂದ್ರಾಳ್ ನಿರ್ದೇಶಿಸುತ್ತಿದ್ದು, ಇದು ಅವರಿಗೆ ನಿರ್ದೇಶಕರಾಗಿ ಮೊದಲ ಚಿತ್ರ. ಈ ಕುರಿತು ಮಾತನಾಡಿರುವ ಅವರು, ‘ರಮೇಶ್‌ ಇಂದಿರಾ ಅವರಿಂದ ಅನುಮತಿ ಪಡೆದು ಅವರ ಫೋಟೋ ಬಳಸಿಕೊಳ್ಳಬೇಕಿತ್ತು. ಮ್ಯಾನೇಜರ್‌ ಹೇಳಿದ್ದಾರೆಂದು ಫೋಟೋ ಬಳಸಲಾಗಿದೆ. ಒಂದು ಸಣ್ಣ ಗೊಂದಲದಿಂದ ತಪ್ಪಾಗಿದೆ. ಈ ಕುರಿತು ರಮೇಶ‍್ ಇಂದಿರಾ ಬಳಿ ಕ್ಷಮೆ ಕೇಳಿದ್ದೇನೆ. ‘ಮೊದಲು ನೀವು ಒಮ್ಮೆ ತಿಳಿಸಬೇಕಿತ್ತು. ಆದರೆ, ಅದು ನಡೆದು ಹೋಗಿದೆ. ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಿ’ ಎಂದು ರಮೇಶ್‌ ಇಂದಿರಾ ಹೇಳಿದ್ದಾರೆ’ ಎಂದು ಮಹಾಂತೇಶ್‍ ಹೇಳಿಕೊಂಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್‌’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಮಹಾಂತೇಶ್‍ ಹಂದ್ರಾಳ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಮತ್ತು ರಚನಾ ಇಂದರ್‍ ನಟಿಸುತ್ತಿರುವ ‘ಸ್ಪಾರ್ಕ್’ ಚಿತ್ರದಲ್ಲಿ ಪ್ರೇಮ್‍ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

9 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

1 hour ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

1 hour ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

1 hour ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

2 hours ago