‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಕ್ಷಮೆ ಕೇಳಿದ್ದು, ಪ್ರಕರಣ ತಣ್ಣಗಾಗಿದೆ.
ಶುಕ್ರವಾರ, ಪ್ರೇಮ್ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಸ್ಪಾರ್ಕ್’ ಎಂಬ ಚಿತ್ರದಲ್ಲಿನ ಅವರ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಪೋಸ್ಟರ್ನಲ್ಲಿ ಪ್ರೇಮ್, ಬೆಂಕಿ ಅಂಟಿರುವ ಭಿತ್ತಿಪತ್ರದಿಂದ ತಮ್ಮ ಸಿಗಾರ್ ಹಚ್ಚುತ್ತಿರುವ ದೃಶ್ಯವಿದೆ. ಈ ಭಿತ್ತಿಪತ್ರದಲ್ಲಿ ರಮೇಶ್ ಇಂದಿರಾ ಅವರ ಭಾವಚಿತ್ರವಿದ್ದು, ತಮ್ಮ ಭಾವಚಿತ್ರವನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವುದರಕ್ಕೆ ಚಿತ್ರತಂಡದ ಬಗ್ಗೆ ರಮೇಶ್ ಇಂದಿರಾ ಬೇಸರಗೊಂಡಿದ್ದರು. ಅಷ್ಟೇ ಅಲ್ಲ, ಚಿತ್ರತಂಡ ಮತ್ತು ಪ್ರೇಮ್ ವಿರುದ್ಧ ಕಾನೂನು ಕ್ರಮ ತೆಗೆದಕೊಳ್ಳುವುದಾಗಿ ಹೇಳಿದ್ದರು.
‘ಸ್ಪಾರ್ಕ್’ ಚಿತ್ರವನ್ನು ಮಹಾಂತೇಶ್ ಹಂದ್ರಾಳ್ ನಿರ್ದೇಶಿಸುತ್ತಿದ್ದು, ಇದು ಅವರಿಗೆ ನಿರ್ದೇಶಕರಾಗಿ ಮೊದಲ ಚಿತ್ರ. ಈ ಕುರಿತು ಮಾತನಾಡಿರುವ ಅವರು, ‘ರಮೇಶ್ ಇಂದಿರಾ ಅವರಿಂದ ಅನುಮತಿ ಪಡೆದು ಅವರ ಫೋಟೋ ಬಳಸಿಕೊಳ್ಳಬೇಕಿತ್ತು. ಮ್ಯಾನೇಜರ್ ಹೇಳಿದ್ದಾರೆಂದು ಫೋಟೋ ಬಳಸಲಾಗಿದೆ. ಒಂದು ಸಣ್ಣ ಗೊಂದಲದಿಂದ ತಪ್ಪಾಗಿದೆ. ಈ ಕುರಿತು ರಮೇಶ್ ಇಂದಿರಾ ಬಳಿ ಕ್ಷಮೆ ಕೇಳಿದ್ದೇನೆ. ‘ಮೊದಲು ನೀವು ಒಮ್ಮೆ ತಿಳಿಸಬೇಕಿತ್ತು. ಆದರೆ, ಅದು ನಡೆದು ಹೋಗಿದೆ. ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಿ’ ಎಂದು ರಮೇಶ್ ಇಂದಿರಾ ಹೇಳಿದ್ದಾರೆ’ ಎಂದು ಮಹಾಂತೇಶ್ ಹೇಳಿಕೊಂಡಿದ್ದಾರೆ.
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಮಹಾಂತೇಶ್ ಹಂದ್ರಾಳ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್ ಮತ್ತು ರಚನಾ ಇಂದರ್ ನಟಿಸುತ್ತಿರುವ ‘ಸ್ಪಾರ್ಕ್’ ಚಿತ್ರದಲ್ಲಿ ಪ್ರೇಮ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…