ಮನರಂಜನೆ

ʼಸ್ಪಾರ್ಕ್‌ʼ ಪೋಸ್ಟರ್‌ ವಿವಾದಕ್ಕೆ ತೆರೆ: ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ಮಹಾಂತೇಶ್‍

‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್‍ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್‍ ಹಂದ್ರಾಳ್‍ ಕ್ಷಮೆ ಕೇಳಿದ್ದು, ಪ್ರಕರಣ ತಣ್ಣಗಾಗಿದೆ.

ಶುಕ್ರವಾರ, ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಸ್ಪಾರ್ಕ್’ ಎಂಬ ಚಿತ್ರದಲ್ಲಿನ ಅವರ ಪೋಸ್ಟರ್‍ ಬಿಡುಗಡೆಯಾಗಿತ್ತು. ಈ ಪೋಸ್ಟರ್‍ನಲ್ಲಿ ಪ್ರೇಮ್‍, ಬೆಂಕಿ ಅಂಟಿರುವ ಭಿತ್ತಿಪತ್ರದಿಂದ ತಮ್ಮ ಸಿಗಾರ್‍ ಹಚ್ಚುತ್ತಿರುವ ದೃಶ್ಯವಿದೆ. ಈ ಭಿತ್ತಿಪತ್ರದಲ್ಲಿ ರಮೇಶ್‍ ಇಂದಿರಾ ಅವರ ಭಾವಚಿತ್ರವಿದ್ದು, ತಮ್ಮ ಭಾವಚಿತ್ರವನ್ನು ಅನುಮತಿ ಇಲ್ಲದೆ ಬಳಸಿಕೊಂಡಿರುವುದರಕ್ಕೆ ಚಿತ್ರತಂಡದ ಬಗ್ಗೆ ರಮೇಶ್ ಇಂದಿರಾ ಬೇಸರಗೊಂಡಿದ್ದರು. ಅಷ್ಟೇ ಅಲ್ಲ, ಚಿತ್ರತಂಡ ಮತ್ತು ಪ್ರೇಮ್‍ ವಿರುದ್ಧ ಕಾನೂನು ಕ್ರಮ ತೆಗೆದಕೊಳ್ಳುವುದಾಗಿ ಹೇಳಿದ್ದರು.

‘ಸ್ಪಾರ್ಕ್‌’ ಚಿತ್ರವನ್ನು ಮಹಾಂತೇಶ್ ಹಂದ್ರಾಳ್ ನಿರ್ದೇಶಿಸುತ್ತಿದ್ದು, ಇದು ಅವರಿಗೆ ನಿರ್ದೇಶಕರಾಗಿ ಮೊದಲ ಚಿತ್ರ. ಈ ಕುರಿತು ಮಾತನಾಡಿರುವ ಅವರು, ‘ರಮೇಶ್‌ ಇಂದಿರಾ ಅವರಿಂದ ಅನುಮತಿ ಪಡೆದು ಅವರ ಫೋಟೋ ಬಳಸಿಕೊಳ್ಳಬೇಕಿತ್ತು. ಮ್ಯಾನೇಜರ್‌ ಹೇಳಿದ್ದಾರೆಂದು ಫೋಟೋ ಬಳಸಲಾಗಿದೆ. ಒಂದು ಸಣ್ಣ ಗೊಂದಲದಿಂದ ತಪ್ಪಾಗಿದೆ. ಈ ಕುರಿತು ರಮೇಶ‍್ ಇಂದಿರಾ ಬಳಿ ಕ್ಷಮೆ ಕೇಳಿದ್ದೇನೆ. ‘ಮೊದಲು ನೀವು ಒಮ್ಮೆ ತಿಳಿಸಬೇಕಿತ್ತು. ಆದರೆ, ಅದು ನಡೆದು ಹೋಗಿದೆ. ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಿ’ ಎಂದು ರಮೇಶ್‌ ಇಂದಿರಾ ಹೇಳಿದ್ದಾರೆ’ ಎಂದು ಮಹಾಂತೇಶ್‍ ಹೇಳಿಕೊಂಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪಾರ್ಕ್‌’ ಚಿತ್ರವನ್ನು ಡಾ. ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ಮಹಾಂತೇಶ್‍ ಹಂದ್ರಾಳ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್‌ ಮತ್ತು ರಚನಾ ಇಂದರ್‍ ನಟಿಸುತ್ತಿರುವ ‘ಸ್ಪಾರ್ಕ್’ ಚಿತ್ರದಲ್ಲಿ ಪ್ರೇಮ್‍ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

46 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

48 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

50 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

52 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

60 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

1 hour ago