ಮನರಂಜನೆ

ರಾತ್ರಿ ಬೇಟೆಗಾರನ ಕಥೆ ಇದು; ‘ಬಘೀರ’ ಟ್ರೇಲರ್ ಬಿಡುಗಡೆ

‘ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಅವರ ಪಾತ್ರ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಮೇಲ್ನೋಟಕ್ಕೆ ಅವರು ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಕಂಡರೂ, ಹಿನ್ನೆಲೆಯಲ್ಲಿ ಬೇರೇನೋ ಇದೆ ಎಂದನಿಸುವುದು ಹೌದು. ಅದು ನಿಜವಾಗಿದೆ. ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಶ್ರೀಮುರಳಿ ಸೂಪರ್‍ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಡಾ. ಸೂರಿ ನಿರ್ದೇಶನದ ‘ಬಘೀರ’ ಚಿತ್ರವು ಇದೇ ಅಕ್ಟೋಬರ್‍ 31ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆ ಇತ್ತೀಚೆಗೆ ಆಗಿದೆ. ಈ ಸಂದರ್ಭದಲ್ಲಿ ಚಿತ್ರದ ಸಾರಾಂಶವೇನು ಎಂದು ನಿರ್ದೇಶಕ ಡಾ. ಸೂರಿ ಹೇಳಿಕೊಂಡಿದ್ದಾರೆ.

‘ಬಘೀರ’ ಕುರಿತು ಮಾತನಾಡುವ ನಿರ್ದೇಶಕ ಸೂರಿ, ‘’ಬಘೀರ’ ಎಂದರೆ ನೈಟ್ ಹಂಟರ್ ಎಂದರ್ಥ. ಇದು ರಾತ್ರಿವೇಳೆಯಲ್ಲೇ ಭೇಟೆಯಾಡುತ್ತದೆ. ನಮ್ಮ ಚಿತ್ರದ ಕಥೆಯ ಹೆಚ್ಚಿನ ಭಾಗ ರಾತ್ರಿಯಲ್ಲೇ ನಡೆಯುತ್ತದೆ. ‘ಸೂಪರ್ ಹೀರೋ’ ಕಾನ್ಸೆಪ್ಟ್ ನ ಈ ತರಹದ ಕಥೆ ನನ್ನ ಪ್ರಕಾರ ಕನ್ನಡದಲ್ಲಿ ಬಂದಿಲ್ಲ.‌ ಇಲ್ಲಿ ರಾತ್ರಿ ಹೊತ್ತು ನಾಯಕ ಬೇಟೆ ಆಡುತ್ತಿರುತ್ತಾನೆ. ಯಾಕೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು’ ಎಂದರು.

ಮೂರು ವರ್ಷಗಳ ಶ್ರಮಕ್ಕೆ ಪ್ರತಿಫಲ ಸಿಗುವ ದಿನ ಸಮೀಪಿಸಿದೆ ಎನ್ನುವ ಶ್ರೀಮುರಳಿ, ‘ಈ ಚಿತ್ರದ ತಂತ್ರಜ್ಞರು, ಕೆಲಸದಲ್ಲಿ ರಾಕ್ಷಸರು. ಅವರ ಕೆಲಸ ತೆರೆಯ ಮೇಲೆ ಕಾಣುತ್ತಿದೆ. ಪ್ರಶಾಂತ್ ನೀಲ್ ಅವರ ಕಥೆಯ ಬಗ್ಗೆ ಹೇಳುವ ಹಾಗೆ ಇಲ್ಲ. ಅಂತಹ ಅದ್ಭುತ ಕಥೆ ಕೊಟ್ಟಿದ್ದಾರೆ ಅವರು. ಸೂಪರ್ ಹೀರೋ ತರಹ ನಾನು ಕಾಣಿಸಿಕೊಂಡಾಗ ಹೆಚ್ಚು ಖುಷಿಯಾಯಿತು’ ಎಂದರು.

‘ಬಘೀರ’ ಚಿತ್ರದಲ್ಲಿ ನಾಯಕಿಯಾಗಿ ರುಕ್ಮಿಣಿ ವಸಂತ್‍ ಅಭಿನಯಿಸಿದರೆ, ನಾಯಕಿಯ ತಾಯಿಯಾಗಿ ಸುಧಾರಾಣಿ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ಗರುಡ ರಾಮ್‍, ಪ್ರಮೋದ್‍ ಶೆಟ್ಟಿ, ರಂಗಾಯಣ ರಘು, ಪ್ರಕಾಶ್‍ ರೈ, ರಾಘು ರಾಮನಕೊಪ್ಪ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಎ.ಜೆ. ಶೆಟ್ಟಿ ಛಾಯಾಗ್ರಹಣ ಮತ್ತು ಅಜನೀಶ್‍ ಲೋಕನಾಥ್‍ ಸಂಗೀತವಿದೆ.

‘ಬಘೀರ’ ಚಿತ್ರದ ಟ್ರೇಲರ್ ನಾಲ್ಕು ಲಕ್ಷ ವೀಕ್ಷಣೆ ಕಂಡಿದೆ.

ಭೂಮಿಕಾ

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

35 mins ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

1 hour ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

2 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

6 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

6 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

6 hours ago