ಮನರಂಜನೆ

ರೌಡಿಸಂ‌ ಕಥೆ ಹೇಳಲು ಶ್ರೀಜೈ ರೆಡಿ; ಸಂದೀಪ್‍ ಅಭಿನಯದಲ್ಲಿ ಹೊಸ ಚಿತ್ರ

ಕಳೆದ ವರ್ಷ, ರಾಧಿಕಾ ಕುಮಾರಸ್ವಾಮಿ ಅಭಿನಯದ ಮತ್ತು ನಿರ್ಮಾಣದ ‘ಭೈರಾದೇವಿ’ ಎಂಬ ಚಿತ್ರ ಬಿಡುಗಡೆಯಾಗಿದ್ದು ನೆನಪಿರಬಹುದು. ದೊಡ್ಡ ಪ್ರಚಾರದೊಂದಿಗೆ ಶುರುವಾದ ಈ ಚಿತ್ರ, ಬಿಡುಗಡೆಯ ನಂತರ ಹೆಚ್ಚು ಸದ್ದು ಮಾಡಲಿಲ್ಲ. ಆ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀಜೈ, ಇದೀಗ ಸದ್ದಿಲ್ಲದೆ ಹೊಸ ಚಿತ್ರವೊಂದರ ಜೊತೆಗೆ ಬಂದಿದ್ದಾರೆ.

ಶ್ರೀಜೈ ಮೊದಲು ನಿರ್ದೇಶಿಸಿದ ಚಿತ್ರವೆಂದರೆ ಅದು ‘ದುನಿಯಾ’ ವಿಜಯ್‍ ಅಭಿನಯದ ‘RX ಸೂರಿ’. ಈ ಚಿತ್ರದ ನಂತರ ಅವರು ‘ಭೈರಾದೇವಿ’ ಚಿತ್ರವನ್ನು ಕೈಗೆತ್ತಿಕೊಂಡಿದ್ದರು. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷದ ನಂತರ ಅವರು ಸಂದೀಪ್ ನಾಗರಾಜ್ ಅಭಿನಯದ ಹೊಸ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ.

ಇದನ್ನು ಓಧಿ: ಸಾಮಾಜಿಕ ಕಾಳಜಿಯುಳ್ಳ ಸಿನಿಮಾ ಕಣ್ಮರೆ : ಸಿ.ಎಂ ವಿಷಾಧ

‘ಪ್ರೊಡಕ್ಷನ್ ನಂ.1’ ಎಂಬ ತಾತ್ಕಾಲಿಕ ಶೀರ್ಷಿಕೆ ಇಟ್ಟು, ಚಿತ್ರವನ್ನು ಘೋಷಣೆ ಮಾಡಲಾಗಿದ್ದು, ಇತ್ತೀಚಿಗೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರದ ಸ್ಕ್ರಿಪ್ಟ್‌ ಪೂಜೆ ಸರಳವಾಗಿ ನೆರವೇರಿದೆ. ತಮ್ಮ ಮೊದಲ ಚಿತ್ರದಲ್ಲಿ ರೌಡಿಸಂ ಕಥೆಯನ್ನು ಹೇಳಿದ್ದ ಶ್ರೀಜೈ, ಈ ಬಾರಿಯೂ ಅಂಥದ್ದೇ ಕಥೆಯನ್ನು ತೆಗೆದುಕೊಂಡಿರುವ ಸಾಧ್ಯತೆ ಇದೆ ಎಂದು ಹೊಸ ಪೋಸ್ಟರ್‍ ಹೇಳುತ್ತದೆ. ಪೋಸ್ಟರ್‍ನಲ್ಲಿ ರಕ್ತ, ಮಚ್ಚು, ಹೆಣ, ಹಗ್ಗ ಎಲ್ಲವೂ ಇದ್ದು, ಇದೊಂದು ರೌಡಿಸಂ ಚಿತ್ರ ಇರಬಹುದು ಎಂಬ ಸುಳಿವು ನೀಡುತ್ತದೆ.

ಸಂದೀಪ್‍ ಈ ಹಿಂದೆ ‘ಅನಂತು vs ನುಸ್ರುತ್’, ‘ಪ್ರಭುತ್ವ’, ‘ಹಾಫ್‍ ಮೆಂಟ್ಲು’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದು, ಇದೀಗ ಶ್ರೀಜೈ ನಿರ್ದೇಶನದ ಹೊಸ ಚಿತ್ರದಲ್ಲಿ ಮಾಸ್ ಲುಕ್‍ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಡ್ರೀಮ್ ವರ್ಲ್ಡ್ ಸಿನಿಮಾಸ್ ಹಾಗೂ ರಾಧಾಕೃಷ್ಣ ಆರ್ಟ್ಸ್ ಬ್ಯಾನರ್‌ನಡಿ ಈ ಹೊಸ ಚಿತ್ರ ನಿರ್ಮಾಣವಾಗಲಿದ್ದು, ಸೋಲೋಮನ್‍ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಸೆಂಥಿಲ್ ಪ್ರಶಾಂತ್ ಸಂಗೀತ ಸಂಯೋಜಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

41 mins ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

1 hour ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

3 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

3 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

3 hours ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

5 hours ago