ಮನರಂಜನೆ

ಶ್ರೀಮುರಳಿ ಹೊಸ ಚಿತ್ರ ‘ಉಗ್ರಾಯುಧಮ್’ಗೆ ಚಾಲನೆ

ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು ಒಂದು ವಾರದ ಅಂತರದಲ್ಲಿ ಶುರುವಾಗಿವೆ. ಕಳೆದ ವಾರವಷ್ಟೇ ಶ್ರೀಮುರಳಿ ಅಭಿನಯದ ‘ಪರಾಕ್‍’, ಶ್ರೀ ಬಂದೆ ಮಹಾಂಕಾಳಿ ದೇವಸ್ಥಾನದಲ್ಲಿ ಪ್ರಾರಂಭವಾಗಿತ್ತು. ಈಗ ಅದೇ ಸ್ಥಳದಲ್ಲಿ ಹೊಸ ಚಿತ್ರ ‘ಉಗ್ರಾಯುಧಮ್‍’ ಪ್ರಾರಂಭವಾಗಿದೆ.

‘ಉಗ್ರಾಯುಧಮ್‍’ ಚಿತ್ರಕ್ಕೆ ಶ್ರೀಮುರಳಿ ಅವರ ತಂದೆ ಹಾಗೂ ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಎಸ್ ಎ.‌ಚಿನ್ನೇಗೌಡ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಜೊತೆಗೂಡಿ ಶೀರ್ಷಿಕೆ ಅನಾವರಣ ಮಾಡಿದರು.

‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರವನ್ನು ನಿರ್ಮಿಸಿದ್ದ ಜಯರಾಮ್‍ ದೇವಸಮುದ್ರ ಈ ‘ಉಗ್ರಾಯುಧಮ್‍’ ಚಿತ್ರವನ್ನು ನಿರ್ಮಿಸಿದರೆ, ಪುನೀತ್‍ ರುದ್ರನಾಗ್‍ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ಪರಾಕ್‍’ ಮೊದಲು ಪ್ರಾರಂಭವಾಗಿದ್ದರೂ, ‘ಉಗ್ರಾಯುಧಮ್‍’ ಚಿತ್ರೀಕರಣ ಮೊದಲು ಪ್ರಾರಂಭವಾಗಲಿದ್ದು, ಮೊದಲು ಬಿಡುಗಡೆಯಾಗಲಿದೆ.

ಇದನ್ನು ಓದಿ : ‘ಜೋಡೆತ್ತು’ ಜತೆ ಬಂದ ಚಿಕ್ಕಣ್ಣ: ಮೂರು ಭಾಷೆಗಳಲ್ಲಿ ಮಹೇಶ್‍ ಸಿನಿಮಾ

‘ಉಗ್ರಾಯುಧಮ್‍’ ಕುರಿತು ಮಾತನಾಡಿದ ಪುನೀತ್‍ ರುದ್ರನಾಗ್‍, ‘ಇದೊಂದು 700 ವರ್ಷಗಳ ಹಿಂದಿನ ಪಿರಿಯಾಡಿಕ್ ಡ್ರಾಮ ಕಥಾಹಂದರ ಹೊಂದಿರುವ ಚಿತ್ರ. ನವೆಂಬರ್ ನಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಸಕಲೇಶಪುರದ ಬಳಿ 135 ಎಕರೆ ವಿಸ್ತೀರ್ಣದ ಭೂಮಿಯಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದ್ದು, ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ನಾನು ಡಾ. ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಸಾಕಷ್ಟು ಐತಿಹಾಸಿಕ ಚಿತ್ರಗಳನ್ನು ನೋಡಿದ್ದೇನೆ. ಅದೇ ನನಗೆ ಈ ಚಿತ್ರ ನಿರ್ದೇಶನ ಮಾಡಲು ಸ್ಪೂರ್ತಿ’ ಎಂದರು.

ನಾನು ‘ಬಘೀರ’ ಚಿತ್ರದ ನಂತರ ಸುಮಾರು 200 ಕಥೆ ಕೇಳಿದ್ದೇನೆ ಎಂದು ಮಾತು ಪ್ರಾರಂಭಿಸಿದ ಶ್ರೀಮುರಳಿ, ‘ಅದರಲ್ಲಿ ನನಗೆ ಇಷ್ಟ ಆಗಿದ್ದು ಮೂರು ಕಥೆಗಳು ಮಾತ್ರ. ಆ ಪೈಕಿ ಎರಡು ಚಿತ್ರಗಳ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಇತ್ತೀಚೆಗೆ ನೆರವೇರಿದೆ. ‘ಬಘೀರ’ ಚಿತ್ರದ ನಂತರ ಬಿಡುಗಡೆಯಾಗುತ್ತಿರುವ ಶ್ರೀಮುರಳಿ ಅವರ ಚಿತ್ರ ಯಾವುದು ಅಂತ ಕೇಳಿದರೆ, ಅದು ‘ಉಗ್ರಾಯುಧಮ್’ ಅಂತ ಹೇಳಬಹುದು. ನಿರ್ದೇಶಕ ಪುನೀತ್ ರುದ್ರನಾಗ್ 700 ವರ್ಷಗಳ ಹಿಂದಿನ ಕಥೆಯನ್ನು ತೆರೆಯ ಮೇಲೆ ತರಲು ಮುಂದಾಗಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂತಹಂತವಾಗಿ ನೀಡುತ್ತೇವೆ’ ಎಂದರು.

ಚಿತ್ರಕ್ಕೆ ದುಡಿಯುತ್ತಿರುವ ಇತರೆ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

12 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

20 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

21 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

1 hour ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago