ಮನರಂಜನೆ

ಶ್ರೀಮುರಳಿ ಹೊಸ ಚಿತ್ರ ‘ಉಗ್ರಾಯುಧಮ್’ಗೆ ಚಾಲನೆ

ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು ಒಂದು ವಾರದ ಅಂತರದಲ್ಲಿ ಶುರುವಾಗಿವೆ. ಕಳೆದ ವಾರವಷ್ಟೇ ಶ್ರೀಮುರಳಿ ಅಭಿನಯದ ‘ಪರಾಕ್‍’, ಶ್ರೀ ಬಂದೆ ಮಹಾಂಕಾಳಿ ದೇವಸ್ಥಾನದಲ್ಲಿ ಪ್ರಾರಂಭವಾಗಿತ್ತು. ಈಗ ಅದೇ ಸ್ಥಳದಲ್ಲಿ ಹೊಸ ಚಿತ್ರ ‘ಉಗ್ರಾಯುಧಮ್‍’ ಪ್ರಾರಂಭವಾಗಿದೆ.

‘ಉಗ್ರಾಯುಧಮ್‍’ ಚಿತ್ರಕ್ಕೆ ಶ್ರೀಮುರಳಿ ಅವರ ತಂದೆ ಹಾಗೂ ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಎಸ್ ಎ.‌ಚಿನ್ನೇಗೌಡ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಜೊತೆಗೂಡಿ ಶೀರ್ಷಿಕೆ ಅನಾವರಣ ಮಾಡಿದರು.

‘ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರವನ್ನು ನಿರ್ಮಿಸಿದ್ದ ಜಯರಾಮ್‍ ದೇವಸಮುದ್ರ ಈ ‘ಉಗ್ರಾಯುಧಮ್‍’ ಚಿತ್ರವನ್ನು ನಿರ್ಮಿಸಿದರೆ, ಪುನೀತ್‍ ರುದ್ರನಾಗ್‍ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ಪರಾಕ್‍’ ಮೊದಲು ಪ್ರಾರಂಭವಾಗಿದ್ದರೂ, ‘ಉಗ್ರಾಯುಧಮ್‍’ ಚಿತ್ರೀಕರಣ ಮೊದಲು ಪ್ರಾರಂಭವಾಗಲಿದ್ದು, ಮೊದಲು ಬಿಡುಗಡೆಯಾಗಲಿದೆ.

ಇದನ್ನು ಓದಿ : ‘ಜೋಡೆತ್ತು’ ಜತೆ ಬಂದ ಚಿಕ್ಕಣ್ಣ: ಮೂರು ಭಾಷೆಗಳಲ್ಲಿ ಮಹೇಶ್‍ ಸಿನಿಮಾ

‘ಉಗ್ರಾಯುಧಮ್‍’ ಕುರಿತು ಮಾತನಾಡಿದ ಪುನೀತ್‍ ರುದ್ರನಾಗ್‍, ‘ಇದೊಂದು 700 ವರ್ಷಗಳ ಹಿಂದಿನ ಪಿರಿಯಾಡಿಕ್ ಡ್ರಾಮ ಕಥಾಹಂದರ ಹೊಂದಿರುವ ಚಿತ್ರ. ನವೆಂಬರ್ ನಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಸಕಲೇಶಪುರದ ಬಳಿ 135 ಎಕರೆ ವಿಸ್ತೀರ್ಣದ ಭೂಮಿಯಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದ್ದು, ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ನಾನು ಡಾ. ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಸಾಕಷ್ಟು ಐತಿಹಾಸಿಕ ಚಿತ್ರಗಳನ್ನು ನೋಡಿದ್ದೇನೆ. ಅದೇ ನನಗೆ ಈ ಚಿತ್ರ ನಿರ್ದೇಶನ ಮಾಡಲು ಸ್ಪೂರ್ತಿ’ ಎಂದರು.

ನಾನು ‘ಬಘೀರ’ ಚಿತ್ರದ ನಂತರ ಸುಮಾರು 200 ಕಥೆ ಕೇಳಿದ್ದೇನೆ ಎಂದು ಮಾತು ಪ್ರಾರಂಭಿಸಿದ ಶ್ರೀಮುರಳಿ, ‘ಅದರಲ್ಲಿ ನನಗೆ ಇಷ್ಟ ಆಗಿದ್ದು ಮೂರು ಕಥೆಗಳು ಮಾತ್ರ. ಆ ಪೈಕಿ ಎರಡು ಚಿತ್ರಗಳ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಇತ್ತೀಚೆಗೆ ನೆರವೇರಿದೆ. ‘ಬಘೀರ’ ಚಿತ್ರದ ನಂತರ ಬಿಡುಗಡೆಯಾಗುತ್ತಿರುವ ಶ್ರೀಮುರಳಿ ಅವರ ಚಿತ್ರ ಯಾವುದು ಅಂತ ಕೇಳಿದರೆ, ಅದು ‘ಉಗ್ರಾಯುಧಮ್’ ಅಂತ ಹೇಳಬಹುದು. ನಿರ್ದೇಶಕ ಪುನೀತ್ ರುದ್ರನಾಗ್ 700 ವರ್ಷಗಳ ಹಿಂದಿನ ಕಥೆಯನ್ನು ತೆರೆಯ ಮೇಲೆ ತರಲು ಮುಂದಾಗಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂತಹಂತವಾಗಿ ನೀಡುತ್ತೇವೆ’ ಎಂದರು.

ಚಿತ್ರಕ್ಕೆ ದುಡಿಯುತ್ತಿರುವ ಇತರೆ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಇನ್ನಷ್ಟೇ ಹೊರಬೀಳಬೇಕಿದೆ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

28 mins ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

2 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

3 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

3 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

3 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

8 hours ago