ಮನರಂಜನೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ಗೆ ಶ್ರೀಮುರಳಿ ಬೆಂಬಲ

ಶ್ರೀಮುರಳಿ ಕಳೆದೆರಡು ವಾರಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ಅವರ ‘ಪರಾಕ್‍’ ಚಿತ್ರದ ಮುಹೂರ್ತವಾಯಿತು. ಕಳೆದ ವಾರ ‘ಉಗ್ರಾಯುಧಮ್‍’ ಚಿತ್ರಕ್ಕೆ ಚಾಲನೆ ಸಿಕ್ಕಿತು. ಈ ವಾರ ಅವರು ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಕ್ಟೋಬರ್.24ರಂದು ಬಿಡುಗಡೆಯಾಗುತ್ತಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರವನ್ನು ಅವರು ಅರ್ಪಿಸುತ್ತಿದ್ದಾರೆ.

ಈ ಹಿಂದೆ, ‘ಮಹಿರಾ’ ಚಿತ್ರವನ್ನು ನಿರ್ದೇಶಿಸಿದ್ದ ಮಹೇಶ್‍ ಗೌಡ ಕಥೆ, ಚಿತ್ರಕಥೆ ಬರೆದು ನಿರ್ಮಿಸಿ, ನಿರ್ದೇಶಿಸಿರುವ ಹೊಸ ಚಿತ್ರ ‘ಬಿಳಿಚುಕ್ಕಿ ಹಳ್ಳಿಹಕ್ಕಿ. ಈ ಚಿತ್ರವನ್ನು ಅರ್ಪಿಸುವುದರ ಜೊತೆಗೆ, ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ ಶ್ರೀಮುರಳಿ.

ಇದನ್ನು ಓದಿ: ನಿಜಜೀವನದ ಪ್ರೇಮಿಗಳಿಂದ ಬಿಡುಗಡೆಯಾಯ್ತು ‘ಜೈ’ ಚಿತ್ರದ ಪ್ರೇಮಗೀತೆ

ಈ ಚಿತ್ರವನ್ನು ಅರ್ಪಿಸುತ್ತಿರುವ ಹಿಂದಿನ ಕಾರಣವನ್ನು ಹೇಳಿದ ಶ್ರೀಮುರಳಿ, ‘ಭಾರತೀಯ ಚಿತ್ರರಂಗದಲ್ಲಿಯೇ ಮೊದಲ ಸಲ ತೊನ್ನು (ವಿಟಿಲಿಗೋ) ಸಮಸ್ಯೆಯ ಸುತ್ತ ರೂಪುಗೊಂಡಿರೋ ಚಿತ್ರವಿದು. ಸ್ವತಃ ಆ ಸಮಸ್ಯೆ ಹೊಂದಿರುವ ವ್ಯಕ್ತಿಯೇ ನಿರ್ದೇಶನ ಮಾಡಿ, ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡು ನಟಿಸಿದ್ದಾರೆ. ಚಿತ್ರ ನೋಡಿ ಇಷ್ಟವಾದ ಕಾರಣ ಈ ಚಿತ್ರವನ್ನು ಅರ್ಪಿಸುವುದಕ್ಕೆ ಮುಂದಾಗಿದ್ದೇನೆ. ಶಾಲಾ ದಿನಗಳಲ್ಲಿ ನನ್ನ ಸ್ನೇಹಿತನೊಬ್ಬ ವಿಟಿಲಿಗೋ ಸಮಸ್ಯೆಯಿಂದ ಬಳಲುತ್ತಿದ್ದ. ವಿಟಿಲಿಗೋವನ್ನು ಸಮಸ್ಯೆ ಅಂದುಕೊಳ್ಳದೇ, ಜೀವನವನ್ನು ಮುನ್ನಡೆಸಬೇಕು’ ಎಂದರು.

ವಿಟಿಲಿಗೋ ಸಮಸ್ಯೆಯ ಸುತ್ತ ಹೆಣೆದಿರುವ ಕಥೆ ಅಂದಾಕ್ಷಣ ಮನೋರಂಜನೆ ಇರುವುದಿಲ್ಲ ಅಂದುಕೊಳ್ಳಬೇಕಿಲ್ಲ ಅಂತಾರೆ ನಿರ್ದೇಶಕ ಮಹೇಶ್‍ ಗೌಡ. ‘ಇದೊಂದು ಪಕ್ಕಾ ಕಮರ್ಶಿಯಲ್ ಧಾಟಿಯ ಸಿನಿಮಾ. ಎಂಥಾ ಗಹನವಾದ ಕಥೆಯನ್ನಾದರೂ ಗಂಭೀರವಾಗಿ ಕಟ್ಟಿಕೊಟ್ಟರೆ ಪ್ರೇಕ್ಷಕರಿಗೆ ತಲುಪೋದು ಕಷ್ಟ. ಹಾಗಿರೋದರಿಂದಲೇ ದುಗುಡವನ್ನೂ ಕೂಡಾ ತೆಳು ಹಾಸ್ಯದ ಮೂಲಕ ದಾಟಿಸುತ್ತಲೇ ಸಾಮಾಜಿಕ ಸಂದೇಶ ನೀಡಲಾಗಿದೆ. ಕುಟುಂಬ ಸಮೇತ ಕೂತು ನೋಡುವಂತಹ ಚಿತ್ರ ಇದು’ ಎಂದರು.

ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್, ಲಕ್ಷ್ಮೀ ಸಿದ್ದಯ್ಯ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್ ಸಿ.ಹೆಚ್‌.ಎಂ ಛಾಯಾಗ್ರಹಣ ಮತ್ತು ರಿಯೋ ಆಂಟನಿ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

10 seconds ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

23 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

35 mins ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

15 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

15 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

16 hours ago