ಮನರಂಜನೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ಗೆ ಶ್ರೀಮುರಳಿ ಬೆಂಬಲ

ಶ್ರೀಮುರಳಿ ಕಳೆದೆರಡು ವಾರಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ಅವರ ‘ಪರಾಕ್‍’ ಚಿತ್ರದ ಮುಹೂರ್ತವಾಯಿತು. ಕಳೆದ ವಾರ ‘ಉಗ್ರಾಯುಧಮ್‍’ ಚಿತ್ರಕ್ಕೆ ಚಾಲನೆ ಸಿಕ್ಕಿತು. ಈ ವಾರ ಅವರು ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಕ್ಟೋಬರ್.24ರಂದು ಬಿಡುಗಡೆಯಾಗುತ್ತಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರವನ್ನು ಅವರು ಅರ್ಪಿಸುತ್ತಿದ್ದಾರೆ.

ಈ ಹಿಂದೆ, ‘ಮಹಿರಾ’ ಚಿತ್ರವನ್ನು ನಿರ್ದೇಶಿಸಿದ್ದ ಮಹೇಶ್‍ ಗೌಡ ಕಥೆ, ಚಿತ್ರಕಥೆ ಬರೆದು ನಿರ್ಮಿಸಿ, ನಿರ್ದೇಶಿಸಿರುವ ಹೊಸ ಚಿತ್ರ ‘ಬಿಳಿಚುಕ್ಕಿ ಹಳ್ಳಿಹಕ್ಕಿ. ಈ ಚಿತ್ರವನ್ನು ಅರ್ಪಿಸುವುದರ ಜೊತೆಗೆ, ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ ಶ್ರೀಮುರಳಿ.

ಇದನ್ನು ಓದಿ: ನಿಜಜೀವನದ ಪ್ರೇಮಿಗಳಿಂದ ಬಿಡುಗಡೆಯಾಯ್ತು ‘ಜೈ’ ಚಿತ್ರದ ಪ್ರೇಮಗೀತೆ

ಈ ಚಿತ್ರವನ್ನು ಅರ್ಪಿಸುತ್ತಿರುವ ಹಿಂದಿನ ಕಾರಣವನ್ನು ಹೇಳಿದ ಶ್ರೀಮುರಳಿ, ‘ಭಾರತೀಯ ಚಿತ್ರರಂಗದಲ್ಲಿಯೇ ಮೊದಲ ಸಲ ತೊನ್ನು (ವಿಟಿಲಿಗೋ) ಸಮಸ್ಯೆಯ ಸುತ್ತ ರೂಪುಗೊಂಡಿರೋ ಚಿತ್ರವಿದು. ಸ್ವತಃ ಆ ಸಮಸ್ಯೆ ಹೊಂದಿರುವ ವ್ಯಕ್ತಿಯೇ ನಿರ್ದೇಶನ ಮಾಡಿ, ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡು ನಟಿಸಿದ್ದಾರೆ. ಚಿತ್ರ ನೋಡಿ ಇಷ್ಟವಾದ ಕಾರಣ ಈ ಚಿತ್ರವನ್ನು ಅರ್ಪಿಸುವುದಕ್ಕೆ ಮುಂದಾಗಿದ್ದೇನೆ. ಶಾಲಾ ದಿನಗಳಲ್ಲಿ ನನ್ನ ಸ್ನೇಹಿತನೊಬ್ಬ ವಿಟಿಲಿಗೋ ಸಮಸ್ಯೆಯಿಂದ ಬಳಲುತ್ತಿದ್ದ. ವಿಟಿಲಿಗೋವನ್ನು ಸಮಸ್ಯೆ ಅಂದುಕೊಳ್ಳದೇ, ಜೀವನವನ್ನು ಮುನ್ನಡೆಸಬೇಕು’ ಎಂದರು.

ವಿಟಿಲಿಗೋ ಸಮಸ್ಯೆಯ ಸುತ್ತ ಹೆಣೆದಿರುವ ಕಥೆ ಅಂದಾಕ್ಷಣ ಮನೋರಂಜನೆ ಇರುವುದಿಲ್ಲ ಅಂದುಕೊಳ್ಳಬೇಕಿಲ್ಲ ಅಂತಾರೆ ನಿರ್ದೇಶಕ ಮಹೇಶ್‍ ಗೌಡ. ‘ಇದೊಂದು ಪಕ್ಕಾ ಕಮರ್ಶಿಯಲ್ ಧಾಟಿಯ ಸಿನಿಮಾ. ಎಂಥಾ ಗಹನವಾದ ಕಥೆಯನ್ನಾದರೂ ಗಂಭೀರವಾಗಿ ಕಟ್ಟಿಕೊಟ್ಟರೆ ಪ್ರೇಕ್ಷಕರಿಗೆ ತಲುಪೋದು ಕಷ್ಟ. ಹಾಗಿರೋದರಿಂದಲೇ ದುಗುಡವನ್ನೂ ಕೂಡಾ ತೆಳು ಹಾಸ್ಯದ ಮೂಲಕ ದಾಟಿಸುತ್ತಲೇ ಸಾಮಾಜಿಕ ಸಂದೇಶ ನೀಡಲಾಗಿದೆ. ಕುಟುಂಬ ಸಮೇತ ಕೂತು ನೋಡುವಂತಹ ಚಿತ್ರ ಇದು’ ಎಂದರು.

ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್, ಲಕ್ಷ್ಮೀ ಸಿದ್ದಯ್ಯ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್ ಸಿ.ಹೆಚ್‌.ಎಂ ಛಾಯಾಗ್ರಹಣ ಮತ್ತು ರಿಯೋ ಆಂಟನಿ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago