ಕಳೆದ ವರ್ಷವೇ ಶ್ರೀಮುರಳಿ ಅಭಿನಯದ ‘ಪರಾಕ್’ ಚಿತ್ರದ ಘೋಷಣೆಯಾಗಿತ್ತು. ‘ಬಘೀರ’ ಬಿಡುಗಡೆಯಾದರೂ ಚಿತ್ರದ ಬಗ್ಗೆ ಸುದ್ದಿಯೇ ಇರಲಿಲ್ಲ. ಇದೀಗ ‘ಪರಾಕ್’ ಕೊನೆಗೂ ಸೆಟ್ಟೇರಿದೆ.
ಸೋಮವಾರ ಬೆಂಗಳೂರಿನ ಬಂಡೆ ಮಹಾಂಕಾಳಿ ದೇಗುಲದಲ್ಲಿ ‘ಪರಾಕ್’ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.
ಇದನ್ನು ಓದಿ : ‘ಕಾಂತಾರ – ಚಾಪ್ಟರ್ 1’ರ ಜೊತೆಗೆ ‘ಕೋಣ’ ಚಿತ್ರದ ಟ್ರೇಲರ್ …
ಈ ಚಿತ್ರದ ಕುರಿತು ಮಾತನಾಡುವ ಶ್ರೀಮುರಳಿ, ‘ಪರಾಕ್’ ಚಿತ್ರದ ಬಗ್ಗೆ ಹೆಚ್ಚು ಹೇಳುವುದು ಕಷ್ಟ. ಇದೊಂದು ವಿಂಟೇಜ್ ಶೈಲಿಯ ಸಿನಿಮಾ. ಯಾವ ಕಾಲಘಟ್ಟದಲ್ಲಿ ನಡೆಯುತ್ತದೆ ಎಂದು ಮುಂದೆ ಹೇಳುತ್ತೇವೆ. ‘ಬಘೀರ’ ನಂತರ ಯಾವ ತರಹದ ಚಿತ್ರದಲ್ಲಿ ನಟಿಸಬೇಕು ಎಂದು ತುಂಬಾ ಟೆನ್ಶನ್ ಇತ್ತು. ಸುಮಾರು 200 ಕಥೆಗಳನ್ನು ಕೇಳಿದ್ದೆ. ಈ ಚಿತ್ರದ ಕಥೆಯನ್ನು ಎರಡು ವರ್ಷಗಳ ಹಿಂದೆಯೇ ಕೇಳಿದ್ದೆ. ಮೊದಲು ಈ ಚಿತ್ರ ಶುರುವಾಗುತ್ತದೆ. ಇದೊಂದು ಸ್ಟೈಲಿಶ್ ಮತ್ತು ಅರ್ಥಪೂರ್ಣ ಚಿತ್ರವಾಗಲಿದೆ. ಈ ಚಿತ್ರಕ್ಕೆ ನನ್ನ ಲುಕ್ ಬದಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವೆ. ಶೂಟಿಂಗ್ ಎಲ್ಲಿ, ನಾಯಕಿ ಯಾರು, ಯಾವ ಬಿಡುಗಡೆ ಎಂದು ಈಗಲೇ ಹೇಳುವುದು ಕಷ್ಟ. ಮುಂದಿನ ದಿನಗಳಲ್ಲಿ ಹೇಳುತ್ತೇನೆ. ನಿರ್ದೇಶಕರ ಕೆಲಸ ಮತ್ತು ಆಯ್ಕೆ ಇಷ್ಟವಾಯಿತು. ಹಾಗಾಗಿ, ಅವರ ಜೊತೆಗೆ ಕೈಜೋಡಿಸಿದ್ದೇನೆ’ ಎಂದರು.
ಈ ಚಿತ್ರವನ್ನು ಹಾಲೇಶ್ ಕೋಗುಂಡಿ ನಿರ್ದೇಶನ ಮಾಡುತ್ತಿದ್ದು, ಇದು ಅವರ ಮೊದಲ ಚಿತ್ರ. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್ ಅಡಿ ‘ಪರಾಕ್’ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸಂದೀಪ್ ವಲ್ಲುರಿ ಛಾಯಾಗ್ರಹಣವಿದೆ
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…