ಮನರಂಜನೆ

ಜೋಗಪ್ಪ, ಜೋಗತಿಯಾಗಿ ಶ್ರೀನಗರ ಕಿಟ್ಟಿ ಹೊಸ ಅವತಾರ

ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ‘ವೇಷಗಳು’ ಎಂಬ ಚಿತ್ರದಲ್ಲಿ ಜೋಗಪ್ಪ, ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಕಿಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಶೀರ್ಷಿಕೆ ಟೀಸರ್‍ ಬಿಡುಗಡೆ ಮಾಡಲಾಗಿದೆ.

ಈ ಚಿತ್ರವು ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ ‘ವೇಷಗಳು’ ಎಂಬ ಸಣ್ಣ ಕಥೆಯನ್ನಾಧರಿಸಿದ ಚಿತ್ರವಾಗಿದೆ. ಈ ಚಿತ್ರವನ್ನು ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ನಿರ್ಮಿಸುವುದರ ಜೊತೆಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಶ್ರೀನಗರ ಕಿಟ್ಟಿ, ‘ರವಿ ಬೆಳಗೆರೆ ಅವರ ಬರಹ, ಬರವಣಿಗೆ, ತಾಕತ್ತು, ಅದಕ್ಕಿದ್ದ ಉದ್ಧ, ಆಳ, ಅಳತೆಗೆ ಬೇರೆ ಆಯಾಮ ಇದೆ. ಅವರ ಕಥೆಗಳಲ್ಲಿರುವ ವೈವಿಧ್ಯತೆ ಅದ್ಭುತ. ‘ವೇಷಗಳು’ ನನ್ನನ್ನು ಬಹಳ ಕಾಡಿದ ಕಥೆ. ಅದನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆ. ಸದ್ಯದಲ್ಲೇ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಪಾತ್ರಕ್ಕಾಗಿ ಒಂದಿಷ್ಟು ಮಾಹಿತಿ ಪಡೆಯಲಿದ್ದೇನೆ. ಆ ನಂತರ ಸಿದ್ಧತೆ ಮಾಡಿಕೊಂಡು ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ’ ಎಂದರು.

‘ವೇಷಗಳು’ ಚಿತ್ರದ ಚಿತ್ರೀಕರಣ ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು. ಚಿತ್ರಕ್ಕೆ ಕೌಶಿಕ್ ಹರ್ಷ ಸಂಗೀತ, ರಾಜ್ ಗುರು ದತ್ತರಾಜ್ ಸಂಭಾಷಣೆ, ಅಕ್ಷಯ್ ಪಿ.ರಾವ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

2 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

2 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

2 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

2 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago