ಮನರಂಜನೆ

ಜೋಗಪ್ಪ, ಜೋಗತಿಯಾಗಿ ಶ್ರೀನಗರ ಕಿಟ್ಟಿ ಹೊಸ ಅವತಾರ

ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ‘ವೇಷಗಳು’ ಎಂಬ ಚಿತ್ರದಲ್ಲಿ ಜೋಗಪ್ಪ, ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಕಿಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಶೀರ್ಷಿಕೆ ಟೀಸರ್‍ ಬಿಡುಗಡೆ ಮಾಡಲಾಗಿದೆ.

ಈ ಚಿತ್ರವು ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ ‘ವೇಷಗಳು’ ಎಂಬ ಸಣ್ಣ ಕಥೆಯನ್ನಾಧರಿಸಿದ ಚಿತ್ರವಾಗಿದೆ. ಈ ಚಿತ್ರವನ್ನು ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ನಿರ್ಮಿಸುವುದರ ಜೊತೆಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಶ್ರೀನಗರ ಕಿಟ್ಟಿ, ‘ರವಿ ಬೆಳಗೆರೆ ಅವರ ಬರಹ, ಬರವಣಿಗೆ, ತಾಕತ್ತು, ಅದಕ್ಕಿದ್ದ ಉದ್ಧ, ಆಳ, ಅಳತೆಗೆ ಬೇರೆ ಆಯಾಮ ಇದೆ. ಅವರ ಕಥೆಗಳಲ್ಲಿರುವ ವೈವಿಧ್ಯತೆ ಅದ್ಭುತ. ‘ವೇಷಗಳು’ ನನ್ನನ್ನು ಬಹಳ ಕಾಡಿದ ಕಥೆ. ಅದನ್ನು ಆಧರಿಸಿ ಈ ಚಿತ್ರ ಮಾಡಲಾಗುತ್ತಿದೆ. ಸದ್ಯದಲ್ಲೇ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಪಾತ್ರಕ್ಕಾಗಿ ಒಂದಿಷ್ಟು ಮಾಹಿತಿ ಪಡೆಯಲಿದ್ದೇನೆ. ಆ ನಂತರ ಸಿದ್ಧತೆ ಮಾಡಿಕೊಂಡು ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ’ ಎಂದರು.

‘ವೇಷಗಳು’ ಚಿತ್ರದ ಚಿತ್ರೀಕರಣ ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು. ಚಿತ್ರಕ್ಕೆ ಕೌಶಿಕ್ ಹರ್ಷ ಸಂಗೀತ, ರಾಜ್ ಗುರು ದತ್ತರಾಜ್ ಸಂಭಾಷಣೆ, ಅಕ್ಷಯ್ ಪಿ.ರಾವ್ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago