ಮನರಂಜನೆ

ಹಾರರ್ ಕಾಮಿಡಿಯೊಂದಿಗೆ ಬಂದ ಸೃಜನ್‍; ‘GST’ ಸದ್ಯದಲ್ಲೇ ತೆರೆಗೆ

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ ಸಹ ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ‘GST’. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ‘U/A’ ಪ್ರಮಾಣಪತ್ರವನ್ನು ಪಡೆದಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ. ಮನೋರಂಜನೆಯೇ ಪ್ರಧಾನವಾಗಿರುವ ‘GST’ ಚಿತ್ರಕ್ಕೆ ‘ಘೋಸ್ಟ್ ಇನ್ ಟ್ರಬಲ್’ ಎಂಬ ಅಡಿಬರಹವಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಅವರ ಮಗ ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂವರೂ ನಟಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನನ್ನು ನಿರ್ದೇಶಿಸಿದ್ದಾರೆ.

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ.

ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

1 hour ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

2 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

2 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

2 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

3 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

3 hours ago