ಮನರಂಜನೆ

ಹಾರರ್ ಕಾಮಿಡಿಯೊಂದಿಗೆ ಬಂದ ಸೃಜನ್‍; ‘GST’ ಸದ್ಯದಲ್ಲೇ ತೆರೆಗೆ

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ ಸಹ ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆಯೇ ಪ್ರಾರಂಭವಾಗಿತ್ತು ‘GST’. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ‘U/A’ ಪ್ರಮಾಣಪತ್ರವನ್ನು ಪಡೆದಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ. ಮನೋರಂಜನೆಯೇ ಪ್ರಧಾನವಾಗಿರುವ ‘GST’ ಚಿತ್ರಕ್ಕೆ ‘ಘೋಸ್ಟ್ ಇನ್ ಟ್ರಬಲ್’ ಎಂಬ ಅಡಿಬರಹವಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಅವರ ಮಗ ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂವರೂ ನಟಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನನ್ನು ನಿರ್ದೇಶಿಸಿದ್ದಾರೆ.

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಪ್ರಮುಖ ಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ.

ಈ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

15 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

47 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago