ಮನರಂಜನೆ

ಈ ದೀಪಾವಳಿ ಹಬ್ಬಕ್ಕೆ ಸ್ಟಾರ್‍ ಚಿತ್ರಗಳ ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಪ್ರತೀ ಬಾರಿ ದೀಪಾವಳಿಗೆ ಬೇರೆಬೇರೆ ಭಾಷೆಗಳಲ್ಲಿ ಒಂದಿಷ್ಟು ನಿರೀಕ್ಷೆಯ ಮತ್ತು ದೊಡ್ಡ ಬಜೆಟ್‍ನ ಚಿತ್ರಗಳು ಬಿಡುಗಡೆಯಾಗುತ್ತವೆ. ಅದಕ್ಕೆ ಈ ಬಾರಿ ಸಹ ಹೊರತಲ್ಲ. ಈ ಬಾರಿಯೂ ಒಂದಿಷ್ಟು ನಿರೀಕ್ಷಿತ ಚಿತ್ರಗಳು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಈ ಪೈಕಿ ಕನ್ನಡದಲ್ಲೊಂದಿಷ್ಟು ಚಿತ್ರಗಳಿವೆಯಾದರೂ, ಹೆಚ್ಚು ಚರ್ಚೆಯಲ್ಲಿರುವುದು ಶ್ರೀಮುರಳಿ ಅಭಿನಯದ ‘ಬಘೀರ’. ಕಳೆದ ಮೂರು ವರ್ಷಗಳಿಂದ ನಿರ್ಮಾಣದಲ್ಲಿರುವ ಈ ಚಿತ್ರ ಕೊನೆಗೂ ಈ ದೀಪಾವಳಿಗೆ ಬಿಡುಗಡೆಯಾಗುತ್ತಿದೆ. ಶ್ರೀಮುರಳಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಿದೆ.

ಹಿಂದಿಯಲ್ಲಿ ಈ ವಾರ ಎರಡು ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಸಿಂಗಂ ಅಗೇನ್‍’, ಇನ್ನೊಂದು ‘ಭೂಲ್‍ ಬುಲಯ್ಯ’. ಎರಡೂ ಚಿತ್ರಗಳು ಜನಪ್ರಿಯ ಸರಣಿಯ ಚಿತ್ರಗಳಾಗಿರುವುದು ವಿಶೇಷ. ‘ಸಿಂಗಂ’ ಮತ್ತು ‘ಸಿಂಗಂ ರಿಟರ್ನ್ಸ್’ ನಂತರ ಸಿಂಗಂ ಪಾತ್ರದಲ್ಲಿ ಅಜಯ್‍ ದೇವಗನ್‍ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಬಹುತಾರಗಣವೇ ಇದೆ. ಅಕ್ಷಯ್‍ ಕುಮಾರ್, ಕರೀನಾ ಕಪೂರ್‍, ದೀಪಿಕಾ ಪಡುಕೋಣೆ, ಟೈಗರ್‍ ಶ್ರಾಫ್‍, ರಣವೀರ್ ಸಿಂಗ್‍ ಮತ್ತು ಅರ್ಜುನ್‍ ಕಪೂರ್‍ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಭೂಲ್‍ ಬುಲಯ್ಯ 3’ ಸಹ ಜನಪ್ರಿಯ ಸರಣಿಯೊಂದರ ಚಿತ್ರ. ಮಲಯಾಳಂನ ‘ಮಣಿಚಿತ್ರತಾಳ್‍’ ಆಧರಿಸಿ ಕೆಲವು ವರ್ಷಗಳ ಹಿಂದೆ ‘ಭೂಲ್‍ ಬುಲಯ್ಯ’ ಚಿತ್ರವು ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಅಕ್ಷಯ್‍ ಕುಮಾರ್‍ ನಾಯಕನಾಗಿ ಕಾಣಿಸಿಕೊಂಡರೆ, ಎರಡನೆಯ ಭಾಗದಲ್ಲಿ ಕಾರ್ತಿಕ್‍ ಆರ್ಯನ್‍ ನಟಿಸಿದ್ದರು. ಮೂರನೆಯ ಭಾಗದಲ್ಲೂ ಅವರೇ ಮುಂದುವರೆದಿದ್ದು, ಈ ಚಿತ್ರದಲ್ಲಿ ವಿದ್ಯಾ ಬಾಲನ್‍ ಮತ್ತು ಮಾಧುರಿ ದೀಕ್ಷಿತ್‍ ಅಂಜುಲಿಕಾ ಮತ್ತು ಮಂಜುಲಿಕಾ ಎಂಬ ದೆವ್ವಗಳಾಗಿ ಕಾಣಿಸಿಕೊಂಡಿದ್ದಾರೆ.

ಇದಲ್ಲದೆ ಶಿವಕಾರ್ತಿಕೇಯನ್‍ ಅಭಿನಯದ ತಮಿಳಿನ ‘ಅಮರನ್‍’, ಜಯಂ ರವಿ ಅಭಿನಯದ ‘ಬ್ರದರ್‍’, ಮಲಯಾಳಂ ನಟ ದುಲ್ಕರ್‍ ಸಲ್ಮಾನ್‍ ಅಭಿನಯದ ತೆಲುಗು ಚಿತ್ರ ‘ಲಕ್ಕಿ ಭಾಸ್ಕರ್‍’ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಇವಲ್ಲದೆ, ಕನ್ನಡದ ನಟ ಧನಂಜಯ್‍ ಅಭಿನಯದ ತೆಲುಗು ಚಿತ್ರ ‘ಜೀಬ್ರಾ’ ಸಹ ಇದೇ ವಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಚಿತ್ರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

40 mins ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

49 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

2 hours ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

2 hours ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

2 hours ago