ಮನರಂಜನೆ

ಈ ದೀಪಾವಳಿ ಹಬ್ಬಕ್ಕೆ ಸ್ಟಾರ್‍ ಚಿತ್ರಗಳ ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಪ್ರತೀ ಬಾರಿ ದೀಪಾವಳಿಗೆ ಬೇರೆಬೇರೆ ಭಾಷೆಗಳಲ್ಲಿ ಒಂದಿಷ್ಟು ನಿರೀಕ್ಷೆಯ ಮತ್ತು ದೊಡ್ಡ ಬಜೆಟ್‍ನ ಚಿತ್ರಗಳು ಬಿಡುಗಡೆಯಾಗುತ್ತವೆ. ಅದಕ್ಕೆ ಈ ಬಾರಿ ಸಹ ಹೊರತಲ್ಲ. ಈ ಬಾರಿಯೂ ಒಂದಿಷ್ಟು ನಿರೀಕ್ಷಿತ ಚಿತ್ರಗಳು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಈ ಪೈಕಿ ಕನ್ನಡದಲ್ಲೊಂದಿಷ್ಟು ಚಿತ್ರಗಳಿವೆಯಾದರೂ, ಹೆಚ್ಚು ಚರ್ಚೆಯಲ್ಲಿರುವುದು ಶ್ರೀಮುರಳಿ ಅಭಿನಯದ ‘ಬಘೀರ’. ಕಳೆದ ಮೂರು ವರ್ಷಗಳಿಂದ ನಿರ್ಮಾಣದಲ್ಲಿರುವ ಈ ಚಿತ್ರ ಕೊನೆಗೂ ಈ ದೀಪಾವಳಿಗೆ ಬಿಡುಗಡೆಯಾಗುತ್ತಿದೆ. ಶ್ರೀಮುರಳಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಿದೆ.

ಹಿಂದಿಯಲ್ಲಿ ಈ ವಾರ ಎರಡು ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಸಿಂಗಂ ಅಗೇನ್‍’, ಇನ್ನೊಂದು ‘ಭೂಲ್‍ ಬುಲಯ್ಯ’. ಎರಡೂ ಚಿತ್ರಗಳು ಜನಪ್ರಿಯ ಸರಣಿಯ ಚಿತ್ರಗಳಾಗಿರುವುದು ವಿಶೇಷ. ‘ಸಿಂಗಂ’ ಮತ್ತು ‘ಸಿಂಗಂ ರಿಟರ್ನ್ಸ್’ ನಂತರ ಸಿಂಗಂ ಪಾತ್ರದಲ್ಲಿ ಅಜಯ್‍ ದೇವಗನ್‍ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಬಹುತಾರಗಣವೇ ಇದೆ. ಅಕ್ಷಯ್‍ ಕುಮಾರ್, ಕರೀನಾ ಕಪೂರ್‍, ದೀಪಿಕಾ ಪಡುಕೋಣೆ, ಟೈಗರ್‍ ಶ್ರಾಫ್‍, ರಣವೀರ್ ಸಿಂಗ್‍ ಮತ್ತು ಅರ್ಜುನ್‍ ಕಪೂರ್‍ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಭೂಲ್‍ ಬುಲಯ್ಯ 3’ ಸಹ ಜನಪ್ರಿಯ ಸರಣಿಯೊಂದರ ಚಿತ್ರ. ಮಲಯಾಳಂನ ‘ಮಣಿಚಿತ್ರತಾಳ್‍’ ಆಧರಿಸಿ ಕೆಲವು ವರ್ಷಗಳ ಹಿಂದೆ ‘ಭೂಲ್‍ ಬುಲಯ್ಯ’ ಚಿತ್ರವು ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಅಕ್ಷಯ್‍ ಕುಮಾರ್‍ ನಾಯಕನಾಗಿ ಕಾಣಿಸಿಕೊಂಡರೆ, ಎರಡನೆಯ ಭಾಗದಲ್ಲಿ ಕಾರ್ತಿಕ್‍ ಆರ್ಯನ್‍ ನಟಿಸಿದ್ದರು. ಮೂರನೆಯ ಭಾಗದಲ್ಲೂ ಅವರೇ ಮುಂದುವರೆದಿದ್ದು, ಈ ಚಿತ್ರದಲ್ಲಿ ವಿದ್ಯಾ ಬಾಲನ್‍ ಮತ್ತು ಮಾಧುರಿ ದೀಕ್ಷಿತ್‍ ಅಂಜುಲಿಕಾ ಮತ್ತು ಮಂಜುಲಿಕಾ ಎಂಬ ದೆವ್ವಗಳಾಗಿ ಕಾಣಿಸಿಕೊಂಡಿದ್ದಾರೆ.

ಇದಲ್ಲದೆ ಶಿವಕಾರ್ತಿಕೇಯನ್‍ ಅಭಿನಯದ ತಮಿಳಿನ ‘ಅಮರನ್‍’, ಜಯಂ ರವಿ ಅಭಿನಯದ ‘ಬ್ರದರ್‍’, ಮಲಯಾಳಂ ನಟ ದುಲ್ಕರ್‍ ಸಲ್ಮಾನ್‍ ಅಭಿನಯದ ತೆಲುಗು ಚಿತ್ರ ‘ಲಕ್ಕಿ ಭಾಸ್ಕರ್‍’ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಇವಲ್ಲದೆ, ಕನ್ನಡದ ನಟ ಧನಂಜಯ್‍ ಅಭಿನಯದ ತೆಲುಗು ಚಿತ್ರ ‘ಜೀಬ್ರಾ’ ಸಹ ಇದೇ ವಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಚಿತ್ರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

33 mins ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

1 hour ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

1 hour ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

1 hour ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

1 hour ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

2 hours ago