ಮನರಂಜನೆ

ಈ ದೀಪಾವಳಿ ಹಬ್ಬಕ್ಕೆ ಸ್ಟಾರ್‍ ಚಿತ್ರಗಳ ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಪ್ರತೀ ಬಾರಿ ದೀಪಾವಳಿಗೆ ಬೇರೆಬೇರೆ ಭಾಷೆಗಳಲ್ಲಿ ಒಂದಿಷ್ಟು ನಿರೀಕ್ಷೆಯ ಮತ್ತು ದೊಡ್ಡ ಬಜೆಟ್‍ನ ಚಿತ್ರಗಳು ಬಿಡುಗಡೆಯಾಗುತ್ತವೆ. ಅದಕ್ಕೆ ಈ ಬಾರಿ ಸಹ ಹೊರತಲ್ಲ. ಈ ಬಾರಿಯೂ ಒಂದಿಷ್ಟು ನಿರೀಕ್ಷಿತ ಚಿತ್ರಗಳು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಈ ಪೈಕಿ ಕನ್ನಡದಲ್ಲೊಂದಿಷ್ಟು ಚಿತ್ರಗಳಿವೆಯಾದರೂ, ಹೆಚ್ಚು ಚರ್ಚೆಯಲ್ಲಿರುವುದು ಶ್ರೀಮುರಳಿ ಅಭಿನಯದ ‘ಬಘೀರ’. ಕಳೆದ ಮೂರು ವರ್ಷಗಳಿಂದ ನಿರ್ಮಾಣದಲ್ಲಿರುವ ಈ ಚಿತ್ರ ಕೊನೆಗೂ ಈ ದೀಪಾವಳಿಗೆ ಬಿಡುಗಡೆಯಾಗುತ್ತಿದೆ. ಶ್ರೀಮುರಳಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಿದೆ.

ಹಿಂದಿಯಲ್ಲಿ ಈ ವಾರ ಎರಡು ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಸಿಂಗಂ ಅಗೇನ್‍’, ಇನ್ನೊಂದು ‘ಭೂಲ್‍ ಬುಲಯ್ಯ’. ಎರಡೂ ಚಿತ್ರಗಳು ಜನಪ್ರಿಯ ಸರಣಿಯ ಚಿತ್ರಗಳಾಗಿರುವುದು ವಿಶೇಷ. ‘ಸಿಂಗಂ’ ಮತ್ತು ‘ಸಿಂಗಂ ರಿಟರ್ನ್ಸ್’ ನಂತರ ಸಿಂಗಂ ಪಾತ್ರದಲ್ಲಿ ಅಜಯ್‍ ದೇವಗನ್‍ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಬಹುತಾರಗಣವೇ ಇದೆ. ಅಕ್ಷಯ್‍ ಕುಮಾರ್, ಕರೀನಾ ಕಪೂರ್‍, ದೀಪಿಕಾ ಪಡುಕೋಣೆ, ಟೈಗರ್‍ ಶ್ರಾಫ್‍, ರಣವೀರ್ ಸಿಂಗ್‍ ಮತ್ತು ಅರ್ಜುನ್‍ ಕಪೂರ್‍ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಭೂಲ್‍ ಬುಲಯ್ಯ 3’ ಸಹ ಜನಪ್ರಿಯ ಸರಣಿಯೊಂದರ ಚಿತ್ರ. ಮಲಯಾಳಂನ ‘ಮಣಿಚಿತ್ರತಾಳ್‍’ ಆಧರಿಸಿ ಕೆಲವು ವರ್ಷಗಳ ಹಿಂದೆ ‘ಭೂಲ್‍ ಬುಲಯ್ಯ’ ಚಿತ್ರವು ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಅಕ್ಷಯ್‍ ಕುಮಾರ್‍ ನಾಯಕನಾಗಿ ಕಾಣಿಸಿಕೊಂಡರೆ, ಎರಡನೆಯ ಭಾಗದಲ್ಲಿ ಕಾರ್ತಿಕ್‍ ಆರ್ಯನ್‍ ನಟಿಸಿದ್ದರು. ಮೂರನೆಯ ಭಾಗದಲ್ಲೂ ಅವರೇ ಮುಂದುವರೆದಿದ್ದು, ಈ ಚಿತ್ರದಲ್ಲಿ ವಿದ್ಯಾ ಬಾಲನ್‍ ಮತ್ತು ಮಾಧುರಿ ದೀಕ್ಷಿತ್‍ ಅಂಜುಲಿಕಾ ಮತ್ತು ಮಂಜುಲಿಕಾ ಎಂಬ ದೆವ್ವಗಳಾಗಿ ಕಾಣಿಸಿಕೊಂಡಿದ್ದಾರೆ.

ಇದಲ್ಲದೆ ಶಿವಕಾರ್ತಿಕೇಯನ್‍ ಅಭಿನಯದ ತಮಿಳಿನ ‘ಅಮರನ್‍’, ಜಯಂ ರವಿ ಅಭಿನಯದ ‘ಬ್ರದರ್‍’, ಮಲಯಾಳಂ ನಟ ದುಲ್ಕರ್‍ ಸಲ್ಮಾನ್‍ ಅಭಿನಯದ ತೆಲುಗು ಚಿತ್ರ ‘ಲಕ್ಕಿ ಭಾಸ್ಕರ್‍’ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಇವಲ್ಲದೆ, ಕನ್ನಡದ ನಟ ಧನಂಜಯ್‍ ಅಭಿನಯದ ತೆಲುಗು ಚಿತ್ರ ‘ಜೀಬ್ರಾ’ ಸಹ ಇದೇ ವಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಚಿತ್ರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago