ಮನರಂಜನೆ

ಈ ದೀಪಾವಳಿ ಹಬ್ಬಕ್ಕೆ ಸ್ಟಾರ್‍ ಚಿತ್ರಗಳ ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಪ್ರತೀ ಬಾರಿ ದೀಪಾವಳಿಗೆ ಬೇರೆಬೇರೆ ಭಾಷೆಗಳಲ್ಲಿ ಒಂದಿಷ್ಟು ನಿರೀಕ್ಷೆಯ ಮತ್ತು ದೊಡ್ಡ ಬಜೆಟ್‍ನ ಚಿತ್ರಗಳು ಬಿಡುಗಡೆಯಾಗುತ್ತವೆ. ಅದಕ್ಕೆ ಈ ಬಾರಿ ಸಹ ಹೊರತಲ್ಲ. ಈ ಬಾರಿಯೂ ಒಂದಿಷ್ಟು ನಿರೀಕ್ಷಿತ ಚಿತ್ರಗಳು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಈ ಪೈಕಿ ಕನ್ನಡದಲ್ಲೊಂದಿಷ್ಟು ಚಿತ್ರಗಳಿವೆಯಾದರೂ, ಹೆಚ್ಚು ಚರ್ಚೆಯಲ್ಲಿರುವುದು ಶ್ರೀಮುರಳಿ ಅಭಿನಯದ ‘ಬಘೀರ’. ಕಳೆದ ಮೂರು ವರ್ಷಗಳಿಂದ ನಿರ್ಮಾಣದಲ್ಲಿರುವ ಈ ಚಿತ್ರ ಕೊನೆಗೂ ಈ ದೀಪಾವಳಿಗೆ ಬಿಡುಗಡೆಯಾಗುತ್ತಿದೆ. ಶ್ರೀಮುರಳಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಿದೆ.

ಹಿಂದಿಯಲ್ಲಿ ಈ ವಾರ ಎರಡು ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಸಿಂಗಂ ಅಗೇನ್‍’, ಇನ್ನೊಂದು ‘ಭೂಲ್‍ ಬುಲಯ್ಯ’. ಎರಡೂ ಚಿತ್ರಗಳು ಜನಪ್ರಿಯ ಸರಣಿಯ ಚಿತ್ರಗಳಾಗಿರುವುದು ವಿಶೇಷ. ‘ಸಿಂಗಂ’ ಮತ್ತು ‘ಸಿಂಗಂ ರಿಟರ್ನ್ಸ್’ ನಂತರ ಸಿಂಗಂ ಪಾತ್ರದಲ್ಲಿ ಅಜಯ್‍ ದೇವಗನ್‍ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಬಹುತಾರಗಣವೇ ಇದೆ. ಅಕ್ಷಯ್‍ ಕುಮಾರ್, ಕರೀನಾ ಕಪೂರ್‍, ದೀಪಿಕಾ ಪಡುಕೋಣೆ, ಟೈಗರ್‍ ಶ್ರಾಫ್‍, ರಣವೀರ್ ಸಿಂಗ್‍ ಮತ್ತು ಅರ್ಜುನ್‍ ಕಪೂರ್‍ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಭೂಲ್‍ ಬುಲಯ್ಯ 3’ ಸಹ ಜನಪ್ರಿಯ ಸರಣಿಯೊಂದರ ಚಿತ್ರ. ಮಲಯಾಳಂನ ‘ಮಣಿಚಿತ್ರತಾಳ್‍’ ಆಧರಿಸಿ ಕೆಲವು ವರ್ಷಗಳ ಹಿಂದೆ ‘ಭೂಲ್‍ ಬುಲಯ್ಯ’ ಚಿತ್ರವು ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಅಕ್ಷಯ್‍ ಕುಮಾರ್‍ ನಾಯಕನಾಗಿ ಕಾಣಿಸಿಕೊಂಡರೆ, ಎರಡನೆಯ ಭಾಗದಲ್ಲಿ ಕಾರ್ತಿಕ್‍ ಆರ್ಯನ್‍ ನಟಿಸಿದ್ದರು. ಮೂರನೆಯ ಭಾಗದಲ್ಲೂ ಅವರೇ ಮುಂದುವರೆದಿದ್ದು, ಈ ಚಿತ್ರದಲ್ಲಿ ವಿದ್ಯಾ ಬಾಲನ್‍ ಮತ್ತು ಮಾಧುರಿ ದೀಕ್ಷಿತ್‍ ಅಂಜುಲಿಕಾ ಮತ್ತು ಮಂಜುಲಿಕಾ ಎಂಬ ದೆವ್ವಗಳಾಗಿ ಕಾಣಿಸಿಕೊಂಡಿದ್ದಾರೆ.

ಇದಲ್ಲದೆ ಶಿವಕಾರ್ತಿಕೇಯನ್‍ ಅಭಿನಯದ ತಮಿಳಿನ ‘ಅಮರನ್‍’, ಜಯಂ ರವಿ ಅಭಿನಯದ ‘ಬ್ರದರ್‍’, ಮಲಯಾಳಂ ನಟ ದುಲ್ಕರ್‍ ಸಲ್ಮಾನ್‍ ಅಭಿನಯದ ತೆಲುಗು ಚಿತ್ರ ‘ಲಕ್ಕಿ ಭಾಸ್ಕರ್‍’ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಇವಲ್ಲದೆ, ಕನ್ನಡದ ನಟ ಧನಂಜಯ್‍ ಅಭಿನಯದ ತೆಲುಗು ಚಿತ್ರ ‘ಜೀಬ್ರಾ’ ಸಹ ಇದೇ ವಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಚಿತ್ರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

57 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago