ಮನರಂಜನೆ

ಈ ದೀಪಾವಳಿ ಹಬ್ಬಕ್ಕೆ ಸ್ಟಾರ್‍ ಚಿತ್ರಗಳ ಸಂಭ್ರಮ

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಪ್ರತೀ ಬಾರಿ ದೀಪಾವಳಿಗೆ ಬೇರೆಬೇರೆ ಭಾಷೆಗಳಲ್ಲಿ ಒಂದಿಷ್ಟು ನಿರೀಕ್ಷೆಯ ಮತ್ತು ದೊಡ್ಡ ಬಜೆಟ್‍ನ ಚಿತ್ರಗಳು ಬಿಡುಗಡೆಯಾಗುತ್ತವೆ. ಅದಕ್ಕೆ ಈ ಬಾರಿ ಸಹ ಹೊರತಲ್ಲ. ಈ ಬಾರಿಯೂ ಒಂದಿಷ್ಟು ನಿರೀಕ್ಷಿತ ಚಿತ್ರಗಳು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.

ಈ ಪೈಕಿ ಕನ್ನಡದಲ್ಲೊಂದಿಷ್ಟು ಚಿತ್ರಗಳಿವೆಯಾದರೂ, ಹೆಚ್ಚು ಚರ್ಚೆಯಲ್ಲಿರುವುದು ಶ್ರೀಮುರಳಿ ಅಭಿನಯದ ‘ಬಘೀರ’. ಕಳೆದ ಮೂರು ವರ್ಷಗಳಿಂದ ನಿರ್ಮಾಣದಲ್ಲಿರುವ ಈ ಚಿತ್ರ ಕೊನೆಗೂ ಈ ದೀಪಾವಳಿಗೆ ಬಿಡುಗಡೆಯಾಗುತ್ತಿದೆ. ಶ್ರೀಮುರಳಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಹೊಂಬಾಳೆ ಫಿಲಂಸ್‍ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಿದೆ.

ಹಿಂದಿಯಲ್ಲಿ ಈ ವಾರ ಎರಡು ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಸಿಂಗಂ ಅಗೇನ್‍’, ಇನ್ನೊಂದು ‘ಭೂಲ್‍ ಬುಲಯ್ಯ’. ಎರಡೂ ಚಿತ್ರಗಳು ಜನಪ್ರಿಯ ಸರಣಿಯ ಚಿತ್ರಗಳಾಗಿರುವುದು ವಿಶೇಷ. ‘ಸಿಂಗಂ’ ಮತ್ತು ‘ಸಿಂಗಂ ರಿಟರ್ನ್ಸ್’ ನಂತರ ಸಿಂಗಂ ಪಾತ್ರದಲ್ಲಿ ಅಜಯ್‍ ದೇವಗನ್‍ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಬಹುತಾರಗಣವೇ ಇದೆ. ಅಕ್ಷಯ್‍ ಕುಮಾರ್, ಕರೀನಾ ಕಪೂರ್‍, ದೀಪಿಕಾ ಪಡುಕೋಣೆ, ಟೈಗರ್‍ ಶ್ರಾಫ್‍, ರಣವೀರ್ ಸಿಂಗ್‍ ಮತ್ತು ಅರ್ಜುನ್‍ ಕಪೂರ್‍ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಭೂಲ್‍ ಬುಲಯ್ಯ 3’ ಸಹ ಜನಪ್ರಿಯ ಸರಣಿಯೊಂದರ ಚಿತ್ರ. ಮಲಯಾಳಂನ ‘ಮಣಿಚಿತ್ರತಾಳ್‍’ ಆಧರಿಸಿ ಕೆಲವು ವರ್ಷಗಳ ಹಿಂದೆ ‘ಭೂಲ್‍ ಬುಲಯ್ಯ’ ಚಿತ್ರವು ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಅಕ್ಷಯ್‍ ಕುಮಾರ್‍ ನಾಯಕನಾಗಿ ಕಾಣಿಸಿಕೊಂಡರೆ, ಎರಡನೆಯ ಭಾಗದಲ್ಲಿ ಕಾರ್ತಿಕ್‍ ಆರ್ಯನ್‍ ನಟಿಸಿದ್ದರು. ಮೂರನೆಯ ಭಾಗದಲ್ಲೂ ಅವರೇ ಮುಂದುವರೆದಿದ್ದು, ಈ ಚಿತ್ರದಲ್ಲಿ ವಿದ್ಯಾ ಬಾಲನ್‍ ಮತ್ತು ಮಾಧುರಿ ದೀಕ್ಷಿತ್‍ ಅಂಜುಲಿಕಾ ಮತ್ತು ಮಂಜುಲಿಕಾ ಎಂಬ ದೆವ್ವಗಳಾಗಿ ಕಾಣಿಸಿಕೊಂಡಿದ್ದಾರೆ.

ಇದಲ್ಲದೆ ಶಿವಕಾರ್ತಿಕೇಯನ್‍ ಅಭಿನಯದ ತಮಿಳಿನ ‘ಅಮರನ್‍’, ಜಯಂ ರವಿ ಅಭಿನಯದ ‘ಬ್ರದರ್‍’, ಮಲಯಾಳಂ ನಟ ದುಲ್ಕರ್‍ ಸಲ್ಮಾನ್‍ ಅಭಿನಯದ ತೆಲುಗು ಚಿತ್ರ ‘ಲಕ್ಕಿ ಭಾಸ್ಕರ್‍’ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಇವಲ್ಲದೆ, ಕನ್ನಡದ ನಟ ಧನಂಜಯ್‍ ಅಭಿನಯದ ತೆಲುಗು ಚಿತ್ರ ‘ಜೀಬ್ರಾ’ ಸಹ ಇದೇ ವಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಚಿತ್ರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

36 seconds ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

2 mins ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

3 mins ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

3 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

3 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

3 hours ago