ಮನರಂಜನೆ

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸುದೀಪ್‌ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ, ಫ್ಯಾನ್‌ ವಾರ್‌ ಮಾತ್ರ ಇನ್ನೂ ನಡೆಯುತ್ತಲೇ ಇದೆ.

ಈ ಬಗ್ಗೆ ನಟಿ ರಕ್ಷಿತಾ ಪ್ರೇಮ್‌ ಇದೀಗ ಮಾಧ್ಯಮಗಳಿಗೆ ರಿಯಾಕ್ಟ್‌ ಮಾಡಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ಮೂರು ಸ್ಟಾರ್‌ಗಳ ಸಿನಿಮಾ ರಿಲೀಸ್‌ ಆಗುತ್ತಿದೆ, “ನಮಗೆ ಅದೇ ಕ್ರಿಸ್ಮಸ್‌ ಆಗೋಗಿಬಿಟ್ಟಿದೆ ಈಗ. ʻಮಾರ್ಕ್‌ʼ ಮತ್ತು ʻ45’ ಸಿನಿಮಾಗೆ ಆಲ್‌ ದಿ ಬೆಸ್ಟ್.‌ ಎರಡೂ ಸಿನಿಮಾ ತುಂಬಾ ದೊಡ್ಡ ಯಶಸ್ಸು ತಂದುಕೊಡಲಿ. ಜನ ಎರಡೂ ಸಿನಿಮಾವನ್ನ ಅಷ್ಟೇ ಪ್ರೀತಿಯಿಂದ ಒಪ್ಪಿಕೊಳ್ಳಲಿ” ಎಂದಿದ್ದಾರೆ.

ಇನ್ನೂ ಸ್ಟಾರ್‌ ವಾರ್‌, ಫ್ಯಾನ್‌ ವಾರ್‌ ಬಗ್ಗೆ ಮಾತನಾಡಿದ ಅವರು, “ನಿನ್ನೆ ನಾನು ಸುದೀಪ್‌ ಅವರ ಇಂಟರ್ವ್ಯೂ ನೋಡ್ತಿದ್ದೆ, ಅವರು ಹೇಳ್ತಿದ್ರು ʻನಾನು ದರ್ಶನ್‌ ಅವರು ಯಾವಾತ್ತಾದ್ರೂ ಮೈಕ್‌ ಹಿಡ್ಕೊಂಡು ಜಗಳ ಆಡಿದ್ದೀವಾ?ʼ ಅಲ್ಲೇ ಮುಗಿದು ಹೋಯ್ತು ಅನಿಸುತ್ತೆ. ಅವರ ಉತ್ತರವನ್ನ ಅವರು ನೀಡಿದ್ದಾರೆ. ಸುದೀಪ್‌ ಅವರು ತುಂಬಾ ಕ್ಲಿಯರ್‌ ಆಗಿ ಹೇಳಿದ್ದಾರೆ, ಆ ತರಹ ಏನು ಇಲ್ಲ ಅಂತ. ನಾವು ಜಗಳ ಮಾಡ್ತಿರೋದು ಒಂದೇ, ಒಬ್ಬರ ಜೊತೆ ಒಬ್ಬರು ಜಗಳ ಆಡ್ತಾ ಇಲ್ಲ. ನಾವೆಲ್ಲಾ ಪೈರಸಿ ವಿರುದ್ಧ ಫೈಟ್‌ ಮಾಡುತ್ತಿದ್ದೇವೆ. ಅದಂತೂ ಖಂಡಿತ ಎಂದರು.

ಇದನ್ನೂ ಓದಿ:-ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಇಂಡಸ್ಟ್ರೀಯಲ್ಲಿ ಸುದೀಪ್‌ ನನ್ನ ಮೊದಲ ಫ್ರೆಂಡ್ ದರ್ಶನ್‌ ಹಾಗೂ ಸುದೀಪ್‌ ಕೂಡ ಸ್ನೇಹಿತರೇ. ಪೈರಸಿ ನಮ್ಮ ದೊಡ್ಡ ಶತ್ರು ಆದರೆ, ತಪ್ಪು ತಿಳುವಳಿಕೆ ಕೂಡ ದೊಡ್ಡ ಶತ್ರು. ಅವರೇ ತಮ್ಮ ಪರವಾಗಿ ಮಾತನಾಡಲಿ. ತಪ್ಪು ತಿಳುವಳಿಕೆ ಪಕ್ಕಕ್ಕಿಟ್ಟು, 45 ಹಾಗೂ ಮಾರ್ಕ್‌ ಚಿತ್ರಕ್ಕೆ ವಿಶ್‌ ಮಾಡೋಣ. ಆ ತರಹ ಏನೂ ಇಲ್ಲ ಅಂತ ಅವರೇ ಕ್ಲಿಯರ್‌ ಆಗಿ ಹೇಳಿದ್ದಾರೆ. ಅವರೇ ಹಾಗೆ ಹೇಳಿದ್ಮೇಲೆ ನಾನು ಹೇಳೋದು ತಪ್ಪಾಗುತ್ತದೆ ಎಂದರು ರಕ್ಷಿತಾ ಪ್ರೇಮ್.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

5 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

6 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

6 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago