ಮನರಂಜನೆ

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸುದೀಪ್‌ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ, ಫ್ಯಾನ್‌ ವಾರ್‌ ಮಾತ್ರ ಇನ್ನೂ ನಡೆಯುತ್ತಲೇ ಇದೆ.

ಈ ಬಗ್ಗೆ ನಟಿ ರಕ್ಷಿತಾ ಪ್ರೇಮ್‌ ಇದೀಗ ಮಾಧ್ಯಮಗಳಿಗೆ ರಿಯಾಕ್ಟ್‌ ಮಾಡಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ಮೂರು ಸ್ಟಾರ್‌ಗಳ ಸಿನಿಮಾ ರಿಲೀಸ್‌ ಆಗುತ್ತಿದೆ, “ನಮಗೆ ಅದೇ ಕ್ರಿಸ್ಮಸ್‌ ಆಗೋಗಿಬಿಟ್ಟಿದೆ ಈಗ. ʻಮಾರ್ಕ್‌ʼ ಮತ್ತು ʻ45’ ಸಿನಿಮಾಗೆ ಆಲ್‌ ದಿ ಬೆಸ್ಟ್.‌ ಎರಡೂ ಸಿನಿಮಾ ತುಂಬಾ ದೊಡ್ಡ ಯಶಸ್ಸು ತಂದುಕೊಡಲಿ. ಜನ ಎರಡೂ ಸಿನಿಮಾವನ್ನ ಅಷ್ಟೇ ಪ್ರೀತಿಯಿಂದ ಒಪ್ಪಿಕೊಳ್ಳಲಿ” ಎಂದಿದ್ದಾರೆ.

ಇನ್ನೂ ಸ್ಟಾರ್‌ ವಾರ್‌, ಫ್ಯಾನ್‌ ವಾರ್‌ ಬಗ್ಗೆ ಮಾತನಾಡಿದ ಅವರು, “ನಿನ್ನೆ ನಾನು ಸುದೀಪ್‌ ಅವರ ಇಂಟರ್ವ್ಯೂ ನೋಡ್ತಿದ್ದೆ, ಅವರು ಹೇಳ್ತಿದ್ರು ʻನಾನು ದರ್ಶನ್‌ ಅವರು ಯಾವಾತ್ತಾದ್ರೂ ಮೈಕ್‌ ಹಿಡ್ಕೊಂಡು ಜಗಳ ಆಡಿದ್ದೀವಾ?ʼ ಅಲ್ಲೇ ಮುಗಿದು ಹೋಯ್ತು ಅನಿಸುತ್ತೆ. ಅವರ ಉತ್ತರವನ್ನ ಅವರು ನೀಡಿದ್ದಾರೆ. ಸುದೀಪ್‌ ಅವರು ತುಂಬಾ ಕ್ಲಿಯರ್‌ ಆಗಿ ಹೇಳಿದ್ದಾರೆ, ಆ ತರಹ ಏನು ಇಲ್ಲ ಅಂತ. ನಾವು ಜಗಳ ಮಾಡ್ತಿರೋದು ಒಂದೇ, ಒಬ್ಬರ ಜೊತೆ ಒಬ್ಬರು ಜಗಳ ಆಡ್ತಾ ಇಲ್ಲ. ನಾವೆಲ್ಲಾ ಪೈರಸಿ ವಿರುದ್ಧ ಫೈಟ್‌ ಮಾಡುತ್ತಿದ್ದೇವೆ. ಅದಂತೂ ಖಂಡಿತ ಎಂದರು.

ಇದನ್ನೂ ಓದಿ:-ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಇಂಡಸ್ಟ್ರೀಯಲ್ಲಿ ಸುದೀಪ್‌ ನನ್ನ ಮೊದಲ ಫ್ರೆಂಡ್ ದರ್ಶನ್‌ ಹಾಗೂ ಸುದೀಪ್‌ ಕೂಡ ಸ್ನೇಹಿತರೇ. ಪೈರಸಿ ನಮ್ಮ ದೊಡ್ಡ ಶತ್ರು ಆದರೆ, ತಪ್ಪು ತಿಳುವಳಿಕೆ ಕೂಡ ದೊಡ್ಡ ಶತ್ರು. ಅವರೇ ತಮ್ಮ ಪರವಾಗಿ ಮಾತನಾಡಲಿ. ತಪ್ಪು ತಿಳುವಳಿಕೆ ಪಕ್ಕಕ್ಕಿಟ್ಟು, 45 ಹಾಗೂ ಮಾರ್ಕ್‌ ಚಿತ್ರಕ್ಕೆ ವಿಶ್‌ ಮಾಡೋಣ. ಆ ತರಹ ಏನೂ ಇಲ್ಲ ಅಂತ ಅವರೇ ಕ್ಲಿಯರ್‌ ಆಗಿ ಹೇಳಿದ್ದಾರೆ. ಅವರೇ ಹಾಗೆ ಹೇಳಿದ್ಮೇಲೆ ನಾನು ಹೇಳೋದು ತಪ್ಪಾಗುತ್ತದೆ ಎಂದರು ರಕ್ಷಿತಾ ಪ್ರೇಮ್.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago