ಮನರಂಜನೆ

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸುದೀಪ್‌ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ, ಫ್ಯಾನ್‌ ವಾರ್‌ ಮಾತ್ರ ಇನ್ನೂ ನಡೆಯುತ್ತಲೇ ಇದೆ.

ಈ ಬಗ್ಗೆ ನಟಿ ರಕ್ಷಿತಾ ಪ್ರೇಮ್‌ ಇದೀಗ ಮಾಧ್ಯಮಗಳಿಗೆ ರಿಯಾಕ್ಟ್‌ ಮಾಡಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ಮೂರು ಸ್ಟಾರ್‌ಗಳ ಸಿನಿಮಾ ರಿಲೀಸ್‌ ಆಗುತ್ತಿದೆ, “ನಮಗೆ ಅದೇ ಕ್ರಿಸ್ಮಸ್‌ ಆಗೋಗಿಬಿಟ್ಟಿದೆ ಈಗ. ʻಮಾರ್ಕ್‌ʼ ಮತ್ತು ʻ45’ ಸಿನಿಮಾಗೆ ಆಲ್‌ ದಿ ಬೆಸ್ಟ್.‌ ಎರಡೂ ಸಿನಿಮಾ ತುಂಬಾ ದೊಡ್ಡ ಯಶಸ್ಸು ತಂದುಕೊಡಲಿ. ಜನ ಎರಡೂ ಸಿನಿಮಾವನ್ನ ಅಷ್ಟೇ ಪ್ರೀತಿಯಿಂದ ಒಪ್ಪಿಕೊಳ್ಳಲಿ” ಎಂದಿದ್ದಾರೆ.

ಇನ್ನೂ ಸ್ಟಾರ್‌ ವಾರ್‌, ಫ್ಯಾನ್‌ ವಾರ್‌ ಬಗ್ಗೆ ಮಾತನಾಡಿದ ಅವರು, “ನಿನ್ನೆ ನಾನು ಸುದೀಪ್‌ ಅವರ ಇಂಟರ್ವ್ಯೂ ನೋಡ್ತಿದ್ದೆ, ಅವರು ಹೇಳ್ತಿದ್ರು ʻನಾನು ದರ್ಶನ್‌ ಅವರು ಯಾವಾತ್ತಾದ್ರೂ ಮೈಕ್‌ ಹಿಡ್ಕೊಂಡು ಜಗಳ ಆಡಿದ್ದೀವಾ?ʼ ಅಲ್ಲೇ ಮುಗಿದು ಹೋಯ್ತು ಅನಿಸುತ್ತೆ. ಅವರ ಉತ್ತರವನ್ನ ಅವರು ನೀಡಿದ್ದಾರೆ. ಸುದೀಪ್‌ ಅವರು ತುಂಬಾ ಕ್ಲಿಯರ್‌ ಆಗಿ ಹೇಳಿದ್ದಾರೆ, ಆ ತರಹ ಏನು ಇಲ್ಲ ಅಂತ. ನಾವು ಜಗಳ ಮಾಡ್ತಿರೋದು ಒಂದೇ, ಒಬ್ಬರ ಜೊತೆ ಒಬ್ಬರು ಜಗಳ ಆಡ್ತಾ ಇಲ್ಲ. ನಾವೆಲ್ಲಾ ಪೈರಸಿ ವಿರುದ್ಧ ಫೈಟ್‌ ಮಾಡುತ್ತಿದ್ದೇವೆ. ಅದಂತೂ ಖಂಡಿತ ಎಂದರು.

ಇದನ್ನೂ ಓದಿ:-ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಇಂಡಸ್ಟ್ರೀಯಲ್ಲಿ ಸುದೀಪ್‌ ನನ್ನ ಮೊದಲ ಫ್ರೆಂಡ್ ದರ್ಶನ್‌ ಹಾಗೂ ಸುದೀಪ್‌ ಕೂಡ ಸ್ನೇಹಿತರೇ. ಪೈರಸಿ ನಮ್ಮ ದೊಡ್ಡ ಶತ್ರು ಆದರೆ, ತಪ್ಪು ತಿಳುವಳಿಕೆ ಕೂಡ ದೊಡ್ಡ ಶತ್ರು. ಅವರೇ ತಮ್ಮ ಪರವಾಗಿ ಮಾತನಾಡಲಿ. ತಪ್ಪು ತಿಳುವಳಿಕೆ ಪಕ್ಕಕ್ಕಿಟ್ಟು, 45 ಹಾಗೂ ಮಾರ್ಕ್‌ ಚಿತ್ರಕ್ಕೆ ವಿಶ್‌ ಮಾಡೋಣ. ಆ ತರಹ ಏನೂ ಇಲ್ಲ ಅಂತ ಅವರೇ ಕ್ಲಿಯರ್‌ ಆಗಿ ಹೇಳಿದ್ದಾರೆ. ಅವರೇ ಹಾಗೆ ಹೇಳಿದ್ಮೇಲೆ ನಾನು ಹೇಳೋದು ತಪ್ಪಾಗುತ್ತದೆ ಎಂದರು ರಕ್ಷಿತಾ ಪ್ರೇಮ್.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago