ಮನರಂಜನೆ

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸುದೀಪ್‌ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ, ಫ್ಯಾನ್‌ ವಾರ್‌ ಮಾತ್ರ ಇನ್ನೂ ನಡೆಯುತ್ತಲೇ ಇದೆ.

ಈ ಬಗ್ಗೆ ನಟಿ ರಕ್ಷಿತಾ ಪ್ರೇಮ್‌ ಇದೀಗ ಮಾಧ್ಯಮಗಳಿಗೆ ರಿಯಾಕ್ಟ್‌ ಮಾಡಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ಮೂರು ಸ್ಟಾರ್‌ಗಳ ಸಿನಿಮಾ ರಿಲೀಸ್‌ ಆಗುತ್ತಿದೆ, “ನಮಗೆ ಅದೇ ಕ್ರಿಸ್ಮಸ್‌ ಆಗೋಗಿಬಿಟ್ಟಿದೆ ಈಗ. ʻಮಾರ್ಕ್‌ʼ ಮತ್ತು ʻ45’ ಸಿನಿಮಾಗೆ ಆಲ್‌ ದಿ ಬೆಸ್ಟ್.‌ ಎರಡೂ ಸಿನಿಮಾ ತುಂಬಾ ದೊಡ್ಡ ಯಶಸ್ಸು ತಂದುಕೊಡಲಿ. ಜನ ಎರಡೂ ಸಿನಿಮಾವನ್ನ ಅಷ್ಟೇ ಪ್ರೀತಿಯಿಂದ ಒಪ್ಪಿಕೊಳ್ಳಲಿ” ಎಂದಿದ್ದಾರೆ.

ಇನ್ನೂ ಸ್ಟಾರ್‌ ವಾರ್‌, ಫ್ಯಾನ್‌ ವಾರ್‌ ಬಗ್ಗೆ ಮಾತನಾಡಿದ ಅವರು, “ನಿನ್ನೆ ನಾನು ಸುದೀಪ್‌ ಅವರ ಇಂಟರ್ವ್ಯೂ ನೋಡ್ತಿದ್ದೆ, ಅವರು ಹೇಳ್ತಿದ್ರು ʻನಾನು ದರ್ಶನ್‌ ಅವರು ಯಾವಾತ್ತಾದ್ರೂ ಮೈಕ್‌ ಹಿಡ್ಕೊಂಡು ಜಗಳ ಆಡಿದ್ದೀವಾ?ʼ ಅಲ್ಲೇ ಮುಗಿದು ಹೋಯ್ತು ಅನಿಸುತ್ತೆ. ಅವರ ಉತ್ತರವನ್ನ ಅವರು ನೀಡಿದ್ದಾರೆ. ಸುದೀಪ್‌ ಅವರು ತುಂಬಾ ಕ್ಲಿಯರ್‌ ಆಗಿ ಹೇಳಿದ್ದಾರೆ, ಆ ತರಹ ಏನು ಇಲ್ಲ ಅಂತ. ನಾವು ಜಗಳ ಮಾಡ್ತಿರೋದು ಒಂದೇ, ಒಬ್ಬರ ಜೊತೆ ಒಬ್ಬರು ಜಗಳ ಆಡ್ತಾ ಇಲ್ಲ. ನಾವೆಲ್ಲಾ ಪೈರಸಿ ವಿರುದ್ಧ ಫೈಟ್‌ ಮಾಡುತ್ತಿದ್ದೇವೆ. ಅದಂತೂ ಖಂಡಿತ ಎಂದರು.

ಇದನ್ನೂ ಓದಿ:-ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಇಂಡಸ್ಟ್ರೀಯಲ್ಲಿ ಸುದೀಪ್‌ ನನ್ನ ಮೊದಲ ಫ್ರೆಂಡ್ ದರ್ಶನ್‌ ಹಾಗೂ ಸುದೀಪ್‌ ಕೂಡ ಸ್ನೇಹಿತರೇ. ಪೈರಸಿ ನಮ್ಮ ದೊಡ್ಡ ಶತ್ರು ಆದರೆ, ತಪ್ಪು ತಿಳುವಳಿಕೆ ಕೂಡ ದೊಡ್ಡ ಶತ್ರು. ಅವರೇ ತಮ್ಮ ಪರವಾಗಿ ಮಾತನಾಡಲಿ. ತಪ್ಪು ತಿಳುವಳಿಕೆ ಪಕ್ಕಕ್ಕಿಟ್ಟು, 45 ಹಾಗೂ ಮಾರ್ಕ್‌ ಚಿತ್ರಕ್ಕೆ ವಿಶ್‌ ಮಾಡೋಣ. ಆ ತರಹ ಏನೂ ಇಲ್ಲ ಅಂತ ಅವರೇ ಕ್ಲಿಯರ್‌ ಆಗಿ ಹೇಳಿದ್ದಾರೆ. ಅವರೇ ಹಾಗೆ ಹೇಳಿದ್ಮೇಲೆ ನಾನು ಹೇಳೋದು ತಪ್ಪಾಗುತ್ತದೆ ಎಂದರು ರಕ್ಷಿತಾ ಪ್ರೇಮ್.

ಆಂದೋಲನ ಡೆಸ್ಕ್

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

4 seconds ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

2 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

2 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

3 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

4 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

7 hours ago