ಮನರಂಜನೆ

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಯುದ್ಧಕ್ಕೆ ಸಿದ್ಧ ಮಾತಿಗೆ ಬದ್ಧ. ಹೊರಗೆ ಒಂದು ಪಡೆ ಯುದ್ಧಕ್ಕೆ ಸಜ್ಜಾಗುತ್ತಿದೆ ಎಂದು ಹುಬ್ಬಳ್ಲೀಯಲ್ಲಿ ಮಾರ್ಕ್‌ ಸಿನಿಮಾ ಪ್ರಿ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸುದೀಪ್‌ ತಮ್ಮ ಹೇಳಿಕೆಯ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ: ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ನಾನು ಯುದ್ಧಕ್ಕೆ ಸಿದ್ಧ ಎಂದಿದ್ದು ಚಿತ್ರನಟ ದರ್ಶನ್‌ ಅವರಿಗಲ್ಲ. ದರ್ಶನ್‌ ಜೈಲಿಗೆ ಹೋಗುವ ವೇಳೆಯಲ್ಲಿ ಸುಮ್ಮನಿದ್ದೆ ನಾನು , ಈಗ ಯಾಕೆ ಅವರ ವಿರುದ್ಧ ಮಾತನಾಡಲಿ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಪತ್ರಿಕಾಗೋಷ್ಠಿಗಳಿಂದ ದೂರವಿರುತ್ತಿದ್ದ ಸುದೀಪ್‌ ತಾವು ಆಡಿದ ಮಾತು ದರ್ಶನ್‌ ಅವರತ್ತ ತಿರುಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ನಾನು ಮಾತನಾಡಿದ್ದು ಪೈರಸಿ ವಿರುದ್ಧ ಎಂದು ಹೇಳಿರುವ ಕಿಚ್ಚ ಸುದೀಪ್‌ ಅವರು, ಇತರರ ಬಗ್ಗೆ ಮಾತನಾಡಬೇಕಾಗಿ ಬಂದರೆ ನಾನು ನೇರವಾಗಿಯೇ ಮಾತನಾಡುತ್ತೇನೆ. ವಿಜಯಲಕ್ಷ್ಮೀ ಅವರು ನನ್ನ ಹೆಸರನ್ನು ಪ್ರಸ್ತಾಪಿಸಿಲ್ಲ. ವೇದಿಕೆ ಹತ್ತಿದವರು, ಮೀಡಿಯಾದಲ್ಲಿ ಮಾತನಾಡಿದವರು ಸಾಕಷ್ಟು ಮಂದಿ ಇದ್ದಾರೆ. ನನ್ನ ಬಗ್ಗೆಯೇ ಮಾತನಾಡಿದ್ದಾರೆ ಎಂದುಕೊಳ್ಳುವುದು ತಪ್ಪು. ನಾನು ಇಲ್ಲಿ ಪ್ರಾರ್ಥನೆ ಮಾಡುವಾಗ ಯಾವುದೋ ದೇವಾಲಯಗಳಲ್ಲಿ ಗಂಟೆ ಹೊಡೆದರೆ ಅದಕ್ಕೆ ನಾನು ಹೇಗೆ ಜವಾಬ್ದಾರನಾಗುತ್ತೇನೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

5 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

5 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

6 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

7 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

9 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

11 hours ago