ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಯುದ್ಧಕ್ಕೆ ಸಿದ್ಧ ಮಾತಿಗೆ ಬದ್ಧ. ಹೊರಗೆ ಒಂದು ಪಡೆ ಯುದ್ಧಕ್ಕೆ ಸಜ್ಜಾಗುತ್ತಿದೆ ಎಂದು ಹುಬ್ಬಳ್ಲೀಯಲ್ಲಿ ಮಾರ್ಕ್ ಸಿನಿಮಾ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸುದೀಪ್ ತಮ್ಮ ಹೇಳಿಕೆಯ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ: ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ
ನಾನು ಯುದ್ಧಕ್ಕೆ ಸಿದ್ಧ ಎಂದಿದ್ದು ಚಿತ್ರನಟ ದರ್ಶನ್ ಅವರಿಗಲ್ಲ. ದರ್ಶನ್ ಜೈಲಿಗೆ ಹೋಗುವ ವೇಳೆಯಲ್ಲಿ ಸುಮ್ಮನಿದ್ದೆ ನಾನು , ಈಗ ಯಾಕೆ ಅವರ ವಿರುದ್ಧ ಮಾತನಾಡಲಿ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಪತ್ರಿಕಾಗೋಷ್ಠಿಗಳಿಂದ ದೂರವಿರುತ್ತಿದ್ದ ಸುದೀಪ್ ತಾವು ಆಡಿದ ಮಾತು ದರ್ಶನ್ ಅವರತ್ತ ತಿರುಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.
ನಾನು ಮಾತನಾಡಿದ್ದು ಪೈರಸಿ ವಿರುದ್ಧ ಎಂದು ಹೇಳಿರುವ ಕಿಚ್ಚ ಸುದೀಪ್ ಅವರು, ಇತರರ ಬಗ್ಗೆ ಮಾತನಾಡಬೇಕಾಗಿ ಬಂದರೆ ನಾನು ನೇರವಾಗಿಯೇ ಮಾತನಾಡುತ್ತೇನೆ. ವಿಜಯಲಕ್ಷ್ಮೀ ಅವರು ನನ್ನ ಹೆಸರನ್ನು ಪ್ರಸ್ತಾಪಿಸಿಲ್ಲ. ವೇದಿಕೆ ಹತ್ತಿದವರು, ಮೀಡಿಯಾದಲ್ಲಿ ಮಾತನಾಡಿದವರು ಸಾಕಷ್ಟು ಮಂದಿ ಇದ್ದಾರೆ. ನನ್ನ ಬಗ್ಗೆಯೇ ಮಾತನಾಡಿದ್ದಾರೆ ಎಂದುಕೊಳ್ಳುವುದು ತಪ್ಪು. ನಾನು ಇಲ್ಲಿ ಪ್ರಾರ್ಥನೆ ಮಾಡುವಾಗ ಯಾವುದೋ ದೇವಾಲಯಗಳಲ್ಲಿ ಗಂಟೆ ಹೊಡೆದರೆ ಅದಕ್ಕೆ ನಾನು ಹೇಗೆ ಜವಾಬ್ದಾರನಾಗುತ್ತೇನೆ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…