‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹಲವು ವಿಷಯಗಳ ಕುರಿತು ಮಾತನಾಡಿದರು.
‘ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಗೌರವ ಬಂದಿದೆ. ಅದನ್ನು ಕಾಪಾಡಿಕೊಳ್ಳಬೇಕು. ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ. ಚಿತ್ರಮಂದಿರಗಳನ್ನು ಕಟ್ಟಿ. ಹೊಸ ಚಿತ್ರಗಳನ್ನು ನಿರ್ಮಾಣ ಮಾಡಿ. ಆಗ ಅದರ ಬೆಲೆ ಗೊತ್ತಾಗುತ್ತದೆ. ಹಿಂದಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವುದಕ್ಕೆ ಬದ್ಧವಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವವನ್ನು ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಮಾಡಬೇಕು ಎಂದು ಚರ್ಚೆ ಪ್ರಾರಂಭಿಸಿದ್ದೇನೆ. ಚಿತ್ರರಂಗಕ್ಕೆ ಹೊಸ ಕಿರೀಟ ಕೊಡುವ ಆಸೆ ಇದೆ. ಬ್ರ್ಯಾಂಡ್ ಬೆಂಗಳೂರು, ಬ್ರ್ಯಾಂಡ್ ಕರ್ನಾಟಕ ಕಟ್ಟುವುದಕ್ಕೆ ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ’ ಎಂದರು.
ಡಾ. ರಾಜಕುಮಾರ್ ಮತ್ತು ಅವರ ಕುಟುಂಬದವರು ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ ಎಂದ ಅವರು, ‘ರಾಜ್ ಕುಟುಂಬದವರು ಯಾವತ್ತೂ ಈ ರಾಜ್ಯದ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಅಪಾರವಾದ ತ್ಯಾಗವನ್ನು ನಾವು ಮರೆಯೋಕೆ ಸಾಧ್ಯವಿಲ್ಲ. ಸರಕಾರ ಸದಾ ಅವರ ಜೊತೆಗೆ ಇದೆ. ಡಾ. ರಾಜಕುಮಾರ್ ಅವರು ಕಿಡ್ನಾಪ್ ಆಗಿದ್ದಾಗ, ಎಸ್.ಎಂ. ಕೃಷ್ಣ ಅವರ ಸರ್ಕಾರವಿದ್ದ ಸಂದರ್ಭದಲ್ಲಿ, ಅವರನ್ನು ಬಿಡಿಸಿ ತಂದ ಪ್ರಯತ್ನ ಇದಕ್ಕೆ ಸಾಕ್ಷಿ. ಅವರ ಕೊಡುಗೆ, ಎಲ್ಲಾ ಚಿತ್ರರಂಗಗಳಿಗೂ ಮಾದರಿ’ ಎಂದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…