ಮನರಂಜನೆ

ಚಿಲ್ಲರೆ ಮಾತು ಬಿಟ್ಟು ಸಿನಿಮಾ ಮಾಡಿ: ಚಿತ್ರರಂಗದವರಿಗೆ ಡಿ.ಕೆ. ಶಿವಕುಮಾರ್ ಕಿವಿಮಾತು

‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಹೇಳಿದ್ದಾರೆ.

ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್‍ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‍ ಹಲವು ವಿಷಯಗಳ ಕುರಿತು ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಗೌರವ ಬಂದಿದೆ. ಅದನ್ನು ಕಾಪಾಡಿಕೊಳ್ಳಬೇಕು. ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ. ಚಿತ್ರಮಂದಿರಗಳನ್ನು ಕಟ್ಟಿ. ಹೊಸ ಚಿತ್ರಗಳನ್ನು ನಿರ್ಮಾಣ ಮಾಡಿ. ಆಗ ಅದರ ಬೆಲೆ ಗೊತ್ತಾಗುತ್ತದೆ. ಹಿಂದಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವುದಕ್ಕೆ ಬದ್ಧವಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವವನ್ನು ಡಿಸೆಂಬರ್‍ ಅಥವಾ ಜನವರಿ ತಿಂಗಳಲ್ಲಿ ಮಾಡಬೇಕು ಎಂದು ಚರ್ಚೆ ಪ್ರಾರಂಭಿಸಿದ್ದೇನೆ. ಚಿತ್ರರಂಗಕ್ಕೆ ಹೊಸ ಕಿರೀಟ ಕೊಡುವ ಆಸೆ ಇದೆ. ಬ್ರ್ಯಾಂಡ್‍ ಬೆಂಗಳೂರು, ಬ್ರ್ಯಾಂಡ್‍ ಕರ್ನಾಟಕ ಕಟ್ಟುವುದಕ್ಕೆ ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ’ ಎಂದರು.

ಡಾ. ರಾಜಕುಮಾರ್‍ ಮತ್ತು ಅವರ ಕುಟುಂಬದವರು ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ ಎಂದ ಅವರು, ‘ರಾಜ್‍ ಕುಟುಂಬದವರು ಯಾವತ್ತೂ ಈ ರಾಜ್ಯದ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಅಪಾರವಾದ ತ್ಯಾಗವನ್ನು ನಾವು ಮರೆಯೋಕೆ ಸಾಧ್ಯವಿಲ್ಲ. ಸರಕಾರ ಸದಾ ಅವರ ಜೊತೆಗೆ ಇದೆ. ಡಾ. ರಾಜಕುಮಾರ್‍ ಅವರು ಕಿಡ್ನಾಪ್‍ ಆಗಿದ್ದಾಗ, ಎಸ್‍.ಎಂ. ಕೃಷ್ಣ ಅವರ ಸರ್ಕಾರವಿದ್ದ ಸಂದರ್ಭದಲ್ಲಿ, ಅವರನ್ನು ಬಿಡಿಸಿ ತಂದ ಪ್ರಯತ್ನ ಇದಕ್ಕೆ ಸಾಕ್ಷಿ. ಅವರ ಕೊಡುಗೆ, ಎಲ್ಲಾ ಚಿತ್ರರಂಗಗಳಿಗೂ ಮಾದರಿ’ ಎಂದರು.

ಆಂದೋಲನ ಡೆಸ್ಕ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

2 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

4 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

5 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

7 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago