‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ ಚಿತ್ರರಂಗದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್, ಶಿವರಾಜಕುಮಾರ್, ಧ್ರುವ ಸರ್ಜಾ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹಲವು ವಿಷಯಗಳ ಕುರಿತು ಮಾತನಾಡಿದರು.
‘ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಗೌರವ ಬಂದಿದೆ. ಅದನ್ನು ಕಾಪಾಡಿಕೊಳ್ಳಬೇಕು. ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ. ಚಿತ್ರಮಂದಿರಗಳನ್ನು ಕಟ್ಟಿ. ಹೊಸ ಚಿತ್ರಗಳನ್ನು ನಿರ್ಮಾಣ ಮಾಡಿ. ಆಗ ಅದರ ಬೆಲೆ ಗೊತ್ತಾಗುತ್ತದೆ. ಹಿಂದಿನ ಕಾಲಕ್ಕೂ ಈಗಿನ ಕಾಲಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸಹಾಯ ಮಾಡುವುದಕ್ಕೆ ಬದ್ಧವಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವವನ್ನು ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಮಾಡಬೇಕು ಎಂದು ಚರ್ಚೆ ಪ್ರಾರಂಭಿಸಿದ್ದೇನೆ. ಚಿತ್ರರಂಗಕ್ಕೆ ಹೊಸ ಕಿರೀಟ ಕೊಡುವ ಆಸೆ ಇದೆ. ಬ್ರ್ಯಾಂಡ್ ಬೆಂಗಳೂರು, ಬ್ರ್ಯಾಂಡ್ ಕರ್ನಾಟಕ ಕಟ್ಟುವುದಕ್ಕೆ ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ’ ಎಂದರು.
ಡಾ. ರಾಜಕುಮಾರ್ ಮತ್ತು ಅವರ ಕುಟುಂಬದವರು ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ ಎಂದ ಅವರು, ‘ರಾಜ್ ಕುಟುಂಬದವರು ಯಾವತ್ತೂ ಈ ರಾಜ್ಯದ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಗೆ ಅಪಾರವಾದ ತ್ಯಾಗವನ್ನು ನಾವು ಮರೆಯೋಕೆ ಸಾಧ್ಯವಿಲ್ಲ. ಸರಕಾರ ಸದಾ ಅವರ ಜೊತೆಗೆ ಇದೆ. ಡಾ. ರಾಜಕುಮಾರ್ ಅವರು ಕಿಡ್ನಾಪ್ ಆಗಿದ್ದಾಗ, ಎಸ್.ಎಂ. ಕೃಷ್ಣ ಅವರ ಸರ್ಕಾರವಿದ್ದ ಸಂದರ್ಭದಲ್ಲಿ, ಅವರನ್ನು ಬಿಡಿಸಿ ತಂದ ಪ್ರಯತ್ನ ಇದಕ್ಕೆ ಸಾಕ್ಷಿ. ಅವರ ಕೊಡುಗೆ, ಎಲ್ಲಾ ಚಿತ್ರರಂಗಗಳಿಗೂ ಮಾದರಿ’ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…