ಮನರಂಜನೆ

ಪೈರಸಿ ತಡೆಗೆ ಕೇಂದ್ರ ಸರ್ಕಾರದಿಂದ ಬಿಗಿ ಕ್ರಮ: ಜಗ್ಗೇಶ್‌ ಪ್ರಶ್ನೆಗೆ ಕೇಂದ್ರ ಸಚಿವರ ಮಾಹಿತಿ

ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್‌ ತಿಳಿಸಿದ್ದಾರೆ.

ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ ಅವರು ಡಿಸೆಂಬರ್.‌11ರಂದು ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಚಲನಚಿತ್ರಗಳ ಪೈರಸಿಯ ಕುರಿತು ನೀವು ಎತ್ತಿರ ಪೈರಸಿ ಕಳವಳದ ಬಗ್ಗೆ ಕೈಗೊಂಡಿರುವ ಕ್ರಮಗಳು ಕುರಿತಾಗಿ ಅವರು ತಿಳಿಸಿದ್ದಾರೆ.

ಪೈರಸಿ ವಿಷಯಗಳನ್ನು ಹೋಸ್ಟ್‌ ಮಾಡುವ ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರ ನೀಡುವ ಮೂಲಕ ಚಲನಚಿತ್ರಗಳ ಪೈರಸಿಯನ್ನು ನಿಗ್ರಹಿಸಲು ಕಾನೂನು ಚೌಕಟ್ಟನ್ನು ಬಲಪಡಿಸಲಾಗಿದೆ.

ಜೊತೆಗೆ ಪೈರಸಿ ವಿರೋಧಿ ತಂತ್ರಗಳನ್ನು ಬಲಪಡಿಸಲು ಹಾಗೂ ಸಂಘಟಿತ ಕ್ರಿಯಾ ಯೋಜನೆಗಳನ್ನು ರೂಪಿಸಲು ಗೃಹ ವ್ಯವಹಾರಗಳ ಸಚಿವಾಲಯದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಯೋಜನೆ ರೂಪಿಸಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

14 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

47 mins ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

2 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

3 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

4 hours ago