ನವದೆಹಲಿ: ತೆಲುಗಿನ ಬಹುನಿರೀಕ್ಷಿತ ಹಾಗೂ ಪ್ಯಾನ್ ಇಂಡಿಯಾ ಚಿತ್ರವಾಗಿರುವ ಪುಷ್ಪ-2 ದಿ ರೂಲ್ ಸಿನಿಮಾ ಟಿಕೆಟ್ ದರ ಏರಿಸಲು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅನುಮತಿ ನೀಡಿದ್ದು, ನಟ ಅಲ್ಲು ಅರ್ಜುನ್ ಧನ್ಯವಾದ ತಿಳಿಸಿದ್ದಾರೆ.
ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಅಲ್ಲು ಅರ್ಜುನ್ ನಟಿಸಿರುವ ಈ ಸಿನಿಮಾಗೆ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದು, ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದ್ದಾರೆ.
ಟಿಕೆಟ್ ದರ ಹೆಚ್ಚಿಸಲು ಸಿಎಂ ಒಪ್ಪಿಗೆ ಸೂಚಿಸಿರುವ ಕಾರಣ ನಟ ಅಲ್ಲು ಅರ್ಜುನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಿಎಂ ಚಂದ್ರಬಾಬು ನಾಯ್ಡುರಿಗೆ ಧನ್ಯವಾದ ತಿಳಿಸಿದ್ದಾರೆ.
ತೆಲುಗು ಚಿತ್ರರಂಗದ ಬೆಳವಣಿಗೆಗಾಗಿ ತೆಗೆದುಕೊಂಡಿರುವ ಈ ನಿರ್ಧಾರವು, ಸಿನಿಮಾದ ಮೇಲೆ ಇರುವ ನಿಮ್ಮ ಬದ್ದತೆಯನ್ನು ತೋರಿಸುತ್ತದೆ. ಚಲನಚಿತ್ರೋದ್ಯಮವನ್ನು ಸಶಕ್ತಗೊಳಿಸಲು ಹೀಗೆ ನಮಗೆ ಪ್ರೋತ್ಸಾಹ ನೀಡುತ್ತಾ ಇರಿ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ರಿಗೆ ಧನ್ಯವಾದ ತಿಳಿಸಿದ್ದಾರೆ.
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…