ನವದೆಹಲಿ: ತೆಲುಗಿನ ಬಹುನಿರೀಕ್ಷಿತ ಹಾಗೂ ಪ್ಯಾನ್ ಇಂಡಿಯಾ ಚಿತ್ರವಾಗಿರುವ ಪುಷ್ಪ-2 ದಿ ರೂಲ್ ಸಿನಿಮಾ ಟಿಕೆಟ್ ದರ ಏರಿಸಲು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅನುಮತಿ ನೀಡಿದ್ದು, ನಟ ಅಲ್ಲು ಅರ್ಜುನ್ ಧನ್ಯವಾದ ತಿಳಿಸಿದ್ದಾರೆ.
ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಅಲ್ಲು ಅರ್ಜುನ್ ನಟಿಸಿರುವ ಈ ಸಿನಿಮಾಗೆ ಮೂವಿ ಮೇಕರ್ಸ್ ಬಂಡವಾಳ ಹೂಡಿದ್ದು, ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದ್ದಾರೆ.
ಟಿಕೆಟ್ ದರ ಹೆಚ್ಚಿಸಲು ಸಿಎಂ ಒಪ್ಪಿಗೆ ಸೂಚಿಸಿರುವ ಕಾರಣ ನಟ ಅಲ್ಲು ಅರ್ಜುನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಿಎಂ ಚಂದ್ರಬಾಬು ನಾಯ್ಡುರಿಗೆ ಧನ್ಯವಾದ ತಿಳಿಸಿದ್ದಾರೆ.
ತೆಲುಗು ಚಿತ್ರರಂಗದ ಬೆಳವಣಿಗೆಗಾಗಿ ತೆಗೆದುಕೊಂಡಿರುವ ಈ ನಿರ್ಧಾರವು, ಸಿನಿಮಾದ ಮೇಲೆ ಇರುವ ನಿಮ್ಮ ಬದ್ದತೆಯನ್ನು ತೋರಿಸುತ್ತದೆ. ಚಲನಚಿತ್ರೋದ್ಯಮವನ್ನು ಸಶಕ್ತಗೊಳಿಸಲು ಹೀಗೆ ನಮಗೆ ಪ್ರೋತ್ಸಾಹ ನೀಡುತ್ತಾ ಇರಿ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ರಿಗೆ ಧನ್ಯವಾದ ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…