ಮನರಂಜನೆ

ತಲೆ ಕೆಳಗಾದ ಲೆಕ್ಕಾಚಾರ: ಎರಡು ದಿನದಲ್ಲಿ ಮೂರು ಕೋಟಿ ಬಾಚಿದ ‘ಸು ಫ್ರಮ್ ಸೋ’

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಗುರುವಾರದವರೆಗೂ ಹೆಚ್ಚು ಸುದ್ದಿಯೇ ಇರಲಿಲ್ಲ. ಯಾವಾಗ ಚಿತ್ರ ಶುಕ್ರವಾರ ಬಿಡುಗಡೆಯಾಗಿ ಚಿತ್ರ ಚೆನ್ನಾಗಿದೆ ಎಂಬ ಪ್ರತಿಕ್ರಿಯೆ ಹೊರಬಿತ್ತೋ, ಅಲ್ಲಿಂದ ಲೆಕ್ಕಾಚಾರವೇ ಬದಲಾಗಿದೆ. ಚಿತ್ರದ ಪ್ರದರ್ಶನ ಹೆಚ್ಚಾಗಿರುವುದಷ್ಟೇ ಅಲ್ಲ, ಕಲೆಕ್ಷನ್‍ ಸಹ ಜೋರಾಗಿದೆ.

‘ಸು ಫ್ರಮ್‍ ಸೋ’ ಚಿತ್ರವು ಸದ್ಯ ಬೆಂಗಳೂರಿನಲ್ಲೇ 200ಕ್ಕೂ ಹೆಚ್ಚು ಪ್ರದರ್ಶನಗಳು ಕಾಣುತ್ತಿದೆ. ಚಿತ್ರದ ಗಳಿಕೆಯೂ ಹೆಚ್ಚಾಗಿದ್ದು, ಮೊದಲ ದಿನ ಸುಮಾರು 80 ಲಕ್ಷ ಗಳಿಕೆಯಾದರೆ, ಎರಡನೇ ದಿನ ಇನ್ನಷ್ಟು ಜಾಸ್ತಿಯಾಗಿದೆ. ಒಟ್ಟಾರೆ ಎರಡು ದಿನಗಳಿಂದ ಮೂರು ಕೋಟಿ ಗಳಿಕೆ ಆಗಿದೆ ಎಂದು ಹೇಳಲಾಗುತ್ತಿದೆ. ಹೊಸಬರ ಚಿತ್ರವೊಂದಕ್ಕೆ ಈ ರೀತಿಯ ಗಳಿಕೆ ಆಗುತ್ತಿರುವುದು ಹಲವರ ಹುಬ್ಬೇರಿಸಿದೆ.

ಈ ಕುರಿತು ಮಾತನಾಡುವ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಜೆ.ಪಿ.ತುಮಿನಾಡು, ‘ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆ ಸಿಕ್ಕಿದೆ. ಒಬ್ಬ ನಿರ್ದೇಶಕ ಇನ್ನೇನು ಕೇಳಲು ಸಾಧ್ಯ? ಜನ ಇಷ್ಟಪಡುತ್ತಾರೆ ಎಂಬ ನಂಬಿಕೆ ಇತ್ತು. ಒಳ್ಳೆಯ ಚಿತ್ರ ಬಂದರೆ ಜನ ಕೈಬಿಟ್ಟಿಲ್ಲ. ಅವರು ಹೊಸಬರು ಎಂದು ನೋಡೋದಿಲ್ಲ. ಚಿತ್ರಕ್ಕೆ ಪ್ರಮುಖವಾಗಿ ಆದ್ಯತೆ ಕೊಡುತ್ತಾರೆ. ಈ ಚಿತ್ರವನ್ನೂ ಇಷ್ಟಪಡುತ್ತಾರೆ ಎಂದು ಗೊತ್ತಿತ್ತು. ಆದರೆ, ಈ ಮಟ್ಟಕ್ಕೆ ಜನ ಸ್ವೀಕರಿಸುತ್ತಾರೆ ಎಂದು ಗೊತ್ತಿರಲಿಲ್ಲ’ ಎನ್ನುತ್ತಾರೆ.

ನಾವೇನು ಅಂದುಕೊಂಡಿದ್ದೆವೋ ಅವೆಲ್ಲವೂ ತಲೆ ಕೆಳಗಾಗಿದೆ ಎನ್ನುವ ತುಮಿನಾಡು, ‘ನಮ್ಮ ಪ್ಲಾನ್‍ಗಳೆಲ್ಲಾ ಬದಲಾಗಿದೆ. ಸಾಕಷ್ಟು ಪ್ರದರ್ಶನಗಳು ಸಿಕ್ಕಿವೆ. ಬೆಂಗಳೂರಲ್ಲೇ 200ಕ್ಕೂ ಹೆಚ್ಚು ಪ್ರದರ್ಶನಗಳು ಇವೆ. ಹೀಗಾಗುತ್ತಿರುವುದಕ್ಕೆ ಕಾರಣ ನಮ್ಮ ನಿರ್ಮಾಪಕ ಮತ್ತು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಜ್‍ ಶೆಟ್ಟಿ. ಅವರು ಚಿತ್ರ ನೋಡಿದ ಮೇಲೆ ಬಹಳ ಖುಷಿಯಾಗಿದ್ದರು. ಇದನ್ನು ನಾವು ಪ್ರಮೋಟ್‍ ಮಾಡುವುದಲ್ಲ, ಜನ ಮಾಡಬೇಕು ಎಂದು ನಾಲ್ಕು ಪ್ರೀಮಿಯರ್‍ ಶೋಗಳನ್ನು ಪ್ಲಾನ್‍ ಮಾಡಿಕೊಟ್ಟರು. ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳನ್ನು ಮಾಡಿದೆವು. ಮೊದಲ ಪ್ರೀಮಿಯರ್‍ ಶೋನಲ್ಲಿ ಜನ ನೋಡಿ ಬಾಯ್ಮಾತಿನ ಪ್ರಚಾರ ಹೆಚ್ಚಾಯಿತು. ಈ ಕ್ರೆಡಿಟ್‍ ರಾಜ್‍ ಬಿ. ಶೆಟ್ಟಿ ಅವರಿಗೆ ಸಲ್ಲಬೇಕು. ಅವರ ಮೇಲೆ ಜನರಿಗೆ ನಂಬಿಕೆ ಇದೆ. ಅವರ ನಿರ್ಮಾಣದ ಚಿತ್ರಗಳು ಚೆನ್ನಾಗಿರುತ್ತವೆ ಎಂಬ ನಂಬಿಕೆ ಇರುವುದರಿಂದ ಜನ ಚಿತ್ರಮಂದಿರದತ್ತ ಬರುತ್ತಿದ್ದಾರೆ’ ಎಂಬುದು ಅವರ ಅಭಿಪ್ರಾಯ.

‘ಸು ಫ್ರಮ್ ಸೋ’ ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago