ಮನರಂಜನೆ

ತಲೆ ಕೆಳಗಾದ ಲೆಕ್ಕಾಚಾರ: ಎರಡು ದಿನದಲ್ಲಿ ಮೂರು ಕೋಟಿ ಬಾಚಿದ ‘ಸು ಫ್ರಮ್ ಸೋ’

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಗುರುವಾರದವರೆಗೂ ಹೆಚ್ಚು ಸುದ್ದಿಯೇ ಇರಲಿಲ್ಲ. ಯಾವಾಗ ಚಿತ್ರ ಶುಕ್ರವಾರ ಬಿಡುಗಡೆಯಾಗಿ ಚಿತ್ರ ಚೆನ್ನಾಗಿದೆ ಎಂಬ ಪ್ರತಿಕ್ರಿಯೆ ಹೊರಬಿತ್ತೋ, ಅಲ್ಲಿಂದ ಲೆಕ್ಕಾಚಾರವೇ ಬದಲಾಗಿದೆ. ಚಿತ್ರದ ಪ್ರದರ್ಶನ ಹೆಚ್ಚಾಗಿರುವುದಷ್ಟೇ ಅಲ್ಲ, ಕಲೆಕ್ಷನ್‍ ಸಹ ಜೋರಾಗಿದೆ.

‘ಸು ಫ್ರಮ್‍ ಸೋ’ ಚಿತ್ರವು ಸದ್ಯ ಬೆಂಗಳೂರಿನಲ್ಲೇ 200ಕ್ಕೂ ಹೆಚ್ಚು ಪ್ರದರ್ಶನಗಳು ಕಾಣುತ್ತಿದೆ. ಚಿತ್ರದ ಗಳಿಕೆಯೂ ಹೆಚ್ಚಾಗಿದ್ದು, ಮೊದಲ ದಿನ ಸುಮಾರು 80 ಲಕ್ಷ ಗಳಿಕೆಯಾದರೆ, ಎರಡನೇ ದಿನ ಇನ್ನಷ್ಟು ಜಾಸ್ತಿಯಾಗಿದೆ. ಒಟ್ಟಾರೆ ಎರಡು ದಿನಗಳಿಂದ ಮೂರು ಕೋಟಿ ಗಳಿಕೆ ಆಗಿದೆ ಎಂದು ಹೇಳಲಾಗುತ್ತಿದೆ. ಹೊಸಬರ ಚಿತ್ರವೊಂದಕ್ಕೆ ಈ ರೀತಿಯ ಗಳಿಕೆ ಆಗುತ್ತಿರುವುದು ಹಲವರ ಹುಬ್ಬೇರಿಸಿದೆ.

ಈ ಕುರಿತು ಮಾತನಾಡುವ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಜೆ.ಪಿ.ತುಮಿನಾಡು, ‘ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆ ಸಿಕ್ಕಿದೆ. ಒಬ್ಬ ನಿರ್ದೇಶಕ ಇನ್ನೇನು ಕೇಳಲು ಸಾಧ್ಯ? ಜನ ಇಷ್ಟಪಡುತ್ತಾರೆ ಎಂಬ ನಂಬಿಕೆ ಇತ್ತು. ಒಳ್ಳೆಯ ಚಿತ್ರ ಬಂದರೆ ಜನ ಕೈಬಿಟ್ಟಿಲ್ಲ. ಅವರು ಹೊಸಬರು ಎಂದು ನೋಡೋದಿಲ್ಲ. ಚಿತ್ರಕ್ಕೆ ಪ್ರಮುಖವಾಗಿ ಆದ್ಯತೆ ಕೊಡುತ್ತಾರೆ. ಈ ಚಿತ್ರವನ್ನೂ ಇಷ್ಟಪಡುತ್ತಾರೆ ಎಂದು ಗೊತ್ತಿತ್ತು. ಆದರೆ, ಈ ಮಟ್ಟಕ್ಕೆ ಜನ ಸ್ವೀಕರಿಸುತ್ತಾರೆ ಎಂದು ಗೊತ್ತಿರಲಿಲ್ಲ’ ಎನ್ನುತ್ತಾರೆ.

ನಾವೇನು ಅಂದುಕೊಂಡಿದ್ದೆವೋ ಅವೆಲ್ಲವೂ ತಲೆ ಕೆಳಗಾಗಿದೆ ಎನ್ನುವ ತುಮಿನಾಡು, ‘ನಮ್ಮ ಪ್ಲಾನ್‍ಗಳೆಲ್ಲಾ ಬದಲಾಗಿದೆ. ಸಾಕಷ್ಟು ಪ್ರದರ್ಶನಗಳು ಸಿಕ್ಕಿವೆ. ಬೆಂಗಳೂರಲ್ಲೇ 200ಕ್ಕೂ ಹೆಚ್ಚು ಪ್ರದರ್ಶನಗಳು ಇವೆ. ಹೀಗಾಗುತ್ತಿರುವುದಕ್ಕೆ ಕಾರಣ ನಮ್ಮ ನಿರ್ಮಾಪಕ ಮತ್ತು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಜ್‍ ಶೆಟ್ಟಿ. ಅವರು ಚಿತ್ರ ನೋಡಿದ ಮೇಲೆ ಬಹಳ ಖುಷಿಯಾಗಿದ್ದರು. ಇದನ್ನು ನಾವು ಪ್ರಮೋಟ್‍ ಮಾಡುವುದಲ್ಲ, ಜನ ಮಾಡಬೇಕು ಎಂದು ನಾಲ್ಕು ಪ್ರೀಮಿಯರ್‍ ಶೋಗಳನ್ನು ಪ್ಲಾನ್‍ ಮಾಡಿಕೊಟ್ಟರು. ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳನ್ನು ಮಾಡಿದೆವು. ಮೊದಲ ಪ್ರೀಮಿಯರ್‍ ಶೋನಲ್ಲಿ ಜನ ನೋಡಿ ಬಾಯ್ಮಾತಿನ ಪ್ರಚಾರ ಹೆಚ್ಚಾಯಿತು. ಈ ಕ್ರೆಡಿಟ್‍ ರಾಜ್‍ ಬಿ. ಶೆಟ್ಟಿ ಅವರಿಗೆ ಸಲ್ಲಬೇಕು. ಅವರ ಮೇಲೆ ಜನರಿಗೆ ನಂಬಿಕೆ ಇದೆ. ಅವರ ನಿರ್ಮಾಣದ ಚಿತ್ರಗಳು ಚೆನ್ನಾಗಿರುತ್ತವೆ ಎಂಬ ನಂಬಿಕೆ ಇರುವುದರಿಂದ ಜನ ಚಿತ್ರಮಂದಿರದತ್ತ ಬರುತ್ತಿದ್ದಾರೆ’ ಎಂಬುದು ಅವರ ಅಭಿಪ್ರಾಯ.

‘ಸು ಫ್ರಮ್ ಸೋ’ ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ, ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಮುಂತಾದವರು ನಟಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

10 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

11 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

12 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

12 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

13 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

15 hours ago