ಮನರಂಜನೆ

ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ಎಸ್‌.ಉಮೇಶ್‌ ನಿಧನ

ಬೆಂಗಳೂರು: ʼತುಂಬಿದ ಮನೆʼ, ʼಅವಳೇ ನನ್ನ ಹೆಂಡ್ತಿʼ ಹೀಗೆ ಹಲವಾರು ಉತ್ತಮ ಸಿನಿಮಾ ನಿರ್ದೇಶನ ಮಾಡಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌.ಉಮೇಶ್‌ (68) ಕಿಡ್ನಿ ವೈಫಲ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ.

ಉಮೇಶ್‌ ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ. ಸಂಜೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.

1973ರಲ್ಲಿ ಸಂಕಲನಕಾರರಾಗಿ ಚಿತ್ರರಂಗ ಪ್ರವೇಶಿಸಿದ ಉಮೇಶ್‌ ಅವರು, ಸುಮಾರು 33 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

ಕಾಶಿನಾಥ್‌ ನಟನೆಯ ʼಅವಳೇ ನನ್ನ ಹೆಂಡ್ತಿʼ ಚಿತ್ರದ ಕಥೆ ಬರೆದವರು ಉಮೇಶ್‌. ಈ ಚಲನಚಿತ್ರ ತಮಿಳಿಗೂ ರಿಮೇಕ್‌ ಆಗಿತ್ತು. ʼಅವನೇ ನನ್ನ ಗಂಡʼ, ʼನಂಬಿದರೆ ನಂಬಿ ಬಿಟ್ರೆ ಬಿಡಿʼ, ʼಸಿಡಿದೆದ್ದ ಗಂಡುʼ, ʼಪ್ರೇಮ ಪರೀಕ್ಷೆʼ, ʼರಾಜಾ ಕೆಂಪು ರಾಜಾʼ, ʼಎಲ್ಲರಂಥಲ್ಲ ನನ್ನ ಗಂಡʼ, ʼದಾಯಾದಿʼ, ʼಅವಳೇ ನನ್ನ ಹುಡುಗಿʼ, ʼಮದುವೆ ದಿಬ್ಬಣʼ, ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಂಜಿನ ನಗರಿಯಲ್ಲಿ ಮೈ ಕೊರೆಯುವ ಚಳಿ

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ  ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…

13 mins ago

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

4 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

4 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

4 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

4 hours ago