ಮನರಂಜನೆ

ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ಎಸ್‌.ಉಮೇಶ್‌ ನಿಧನ

ಬೆಂಗಳೂರು: ʼತುಂಬಿದ ಮನೆʼ, ʼಅವಳೇ ನನ್ನ ಹೆಂಡ್ತಿʼ ಹೀಗೆ ಹಲವಾರು ಉತ್ತಮ ಸಿನಿಮಾ ನಿರ್ದೇಶನ ಮಾಡಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌.ಉಮೇಶ್‌ (68) ಕಿಡ್ನಿ ವೈಫಲ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ.

ಉಮೇಶ್‌ ಅವರಿಗೆ ಪತ್ನಿ, ಮೂವರು ಮಕ್ಕಳು ಇದ್ದಾರೆ. ಸಂಜೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.

1973ರಲ್ಲಿ ಸಂಕಲನಕಾರರಾಗಿ ಚಿತ್ರರಂಗ ಪ್ರವೇಶಿಸಿದ ಉಮೇಶ್‌ ಅವರು, ಸುಮಾರು 33 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

ಕಾಶಿನಾಥ್‌ ನಟನೆಯ ʼಅವಳೇ ನನ್ನ ಹೆಂಡ್ತಿʼ ಚಿತ್ರದ ಕಥೆ ಬರೆದವರು ಉಮೇಶ್‌. ಈ ಚಲನಚಿತ್ರ ತಮಿಳಿಗೂ ರಿಮೇಕ್‌ ಆಗಿತ್ತು. ʼಅವನೇ ನನ್ನ ಗಂಡʼ, ʼನಂಬಿದರೆ ನಂಬಿ ಬಿಟ್ರೆ ಬಿಡಿʼ, ʼಸಿಡಿದೆದ್ದ ಗಂಡುʼ, ʼಪ್ರೇಮ ಪರೀಕ್ಷೆʼ, ʼರಾಜಾ ಕೆಂಪು ರಾಜಾʼ, ʼಎಲ್ಲರಂಥಲ್ಲ ನನ್ನ ಗಂಡʼ, ʼದಾಯಾದಿʼ, ʼಅವಳೇ ನನ್ನ ಹುಡುಗಿʼ, ʼಮದುವೆ ದಿಬ್ಬಣʼ, ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago