‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್ ಆಗಲೀ, ನಿರ್ದೇಶಕ ಪ್ರೇಮ್ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? ಅಥವಾ ಇದು ಗಾಳಿಸುದ್ದಿಯಾ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಸುದೀಪ್, ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದು, ಹೈದರಾಬಾದ್ನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಅವರು ಭಾಗವಹಿಸಿದ್ದಾರೆ. ಸುದೀಪ್ ನಟಿಸುತ್ತಿರುವ ವಿಷಯವನ್ನು ಚಿತ್ರತಂಡದವರೇ ಸ್ಪಷ್ಟಪಡಿಸಿದ್ದಾರೆ. ಆದರೆ, ಚಿತ್ರದಲ್ಲಿ ಸುದೀಪ್ ಅವರ ಪಾತ್ರವೇನು? ಎಷ್ಟು ಹೊತ್ತು ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರೆ ಮುಂತಾದ ಎಲ್ಲಾ ವಿಷಯಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ.
‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ದೊಡ್ಡ ತಾರಾಗಣವಿದೆ. ಧ್ರುವ ಸರ್ಜಾ ನಾಯಕನಾಗಿ ನಟಿಸುವುದರ ಜೊತೆಗೆ ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್ ಮುಂತಾದವರು ನಟಿಸಿದ್ದಾರೆ. ಈಗ ಈ ತಾರಾಗಣಕ್ಕೆ ಸುದೀಪ್ ಸಹ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಚಿತ್ರದಲ್ಲಿ ಸುದೀಪ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ, ‘ಕೆಡಿ – ದಿ ವಿಲನ್’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.
‘ಕೆಡಿ – ದಿ ಡೆವಿಲ್’ ಚಿತ್ರಕ್ಕೆ ಪ್ರೇಮ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕೆ.ವಿ.ಎನ್. ಪ್ರೊಡಕ್ಷನ್ಸ್ ಬ್ಯಾನರ್ನಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಮತ್ತು ವಿಲಿಯಂ ಡೇವಿಡ್ ಛಾಯಾಗ್ರಹಣ ಚಿತ್ರಕ್ಕಿದೆ.
ಈ ಚಿತ್ರದ ಚಿತರೀಕರಣ ಮುಗಿದಿದ್ದು, ಬರೀ ಸುದೀಪ್ ಅಭಿನಯದ ಭಾಗದ ಚಿತ್ರೀಕರಣ ಮಾತ್ರ ಬಾಕಿ ಇತ್ತು. ಅದೂ ಮುಕ್ತಾಯದ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಮೂಲಗಳ ಪ್ರಕಾರ, ನವೆಂಬರ್ ತಿಂಗಳಲ್ಲಿ ಚಿತ್ರದ ಬಿಡಗುಡೆ ಆಗಲಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…