ಮನರಂಜನೆ

‘ಮಾರ್ನಮಿ’ ಟ್ರೇಲರ್‍ಗೆ ಸುದೀಪ್‍ ಧ್ವನಿ: ನ.28ಕ್ಕೆ ಚಿತ್ರ ಬಿಡುಗಡೆ

ಸುದೀಪ್‍ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್‍ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್‍ಗೆ ಸುದೀಪ್‍ ಧ್ವನಿ ನೀಡಿರುವುದು ವಿಶೇಷ. ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿರುವ ಸುದೀಪ್‍, ‘ಟ್ರೇಲರ್ ಬಹಳ ಆಸಕ್ತಿಕರವಾಗಿದೆ. ಈ ತರಹದ ಕಥೆಗಳನ್ನು ಪರದೆ ಮೇಲೆ ತರುವುದು ದೊಡ್ಡ ಸವಾಲಿನ ವಿಷಯ. ಆ ವಿಷಯದಲ್ಲಿ ಈ ತಂಡ ಗೆದ್ದಿದೆ, ನಿರ್ದೇಶಕರು ತುಂಬಾ ಕಷ್ಟಪಟ್ಟಿದ್ದಾರೆ ಹಾಕಿದ್ದಾರೆ.

ಇದನ್ನು ಓದಿ: ‘ಮಾರ್ಕ್’ ಚಿತ್ರೀಕರಣ ಮುಕ್ತಾಯ: ಡಿಸೆಂಬರ್.25ಕ್ಕೆ ಚಿತ್ರಮಂದಿರಗಳಿಗೆ ಎಂಟ್ರಿ

ಅವರದ್ದೇ ಊರಿನ ಕಥೆಯನ್ನು ಪರದೆ ಮೇಲೆ ತರುವುದು ಸುಲಭವಲ್ಲ. ಆದರೆ, ನಿರ್ದೇಶಕರು ಅದನ್ನು ಸಾಧಿಸಿದ್ದಾರೆ. ಚರಣ್ ರಾಜ್ ಸಂಗೀತ ಚೆನ್ನಾಗಿದೆ. ಈ ಚಿತ್ರ ದೊಡ್ಡ ರೀತಿ ಯಶಸ್ಸು ಕಾಣಲಿದೆ’ ಎಂದು ಭವಿಷ್ಯ ನುಡಿದರು. ಈ ಚಿತ್ರದ ಮೂಲಕ ‘ಗಿಣಿರಾಮ’ ಖ್ಯಾತಿ ರಿತ್ವಿಕ್‍ ಮಠದ್‍ ಹೀರೋ ಆಗುತ್ತಿದ್ದಾರೆ. ಅವರ ಜೀವನದಲ್ಲಿ ಒಬ್ಬ ಸ್ಟಾರ್‍ ನಟನನ್ನು ಹತ್ತಿರದಿಂದ ನೋಡಿದ್ದೆಂದರೆ ಅದು ಸುದೀಪ್‍ ಅಂತೆ.

‘ಸಿನಿಮಾ ಅಂದರೆ ಸುದೀಪ್‍ ಬಹಳ ಪ್ರೋತ್ಸಾಹ ಕೊಡುತ್ತಾರೆ. ಕರಾವಳಿ ಭಾಗದಲ್ಲಿ ನಡೆದ ಕಥೆಯನ್ನು ‘ಮಾರ್ನಮಿ’ ಸಿನಿಮಾ ಮೂಲಕ ಹೇಳಲು ಹೊರಟಿದ್ದೇವೆ’ ಎಂದರು. ‘ಮಾರ್ನಮಿ’ ಚಿತ್ರದಲ್ಲಿ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಜೊತೆಗೆ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ , ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರಾ ಶೆಟ್ಟಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಚರಣ್ ರಾಜ್ ಸಂಗೀತ, ಶಿವಸೇನಾ ಛಾಯಾಗ್ರಹಣ,, ಸುಧೀ ಆರ್ಯನ್‍ ಕಥೆ ಚಿತ್ರಕ್ಕಿದ್ದು, ಗುಣಾಧ್ಯ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಶಿಲ್ಪಾ ನಿಶಾಂತ್ ಹಾಗೂ ನಿಶಾಂತ್ ಚಿತ್ರ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

4 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago