ಮನರಂಜನೆ

‘ಮಾರ್ನಮಿ’ ಟ್ರೇಲರ್‍ಗೆ ಸುದೀಪ್‍ ಧ್ವನಿ: ನ.28ಕ್ಕೆ ಚಿತ್ರ ಬಿಡುಗಡೆ

ಸುದೀಪ್‍ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್‍ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್‍ಗೆ ಸುದೀಪ್‍ ಧ್ವನಿ ನೀಡಿರುವುದು ವಿಶೇಷ. ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿರುವ ಸುದೀಪ್‍, ‘ಟ್ರೇಲರ್ ಬಹಳ ಆಸಕ್ತಿಕರವಾಗಿದೆ. ಈ ತರಹದ ಕಥೆಗಳನ್ನು ಪರದೆ ಮೇಲೆ ತರುವುದು ದೊಡ್ಡ ಸವಾಲಿನ ವಿಷಯ. ಆ ವಿಷಯದಲ್ಲಿ ಈ ತಂಡ ಗೆದ್ದಿದೆ, ನಿರ್ದೇಶಕರು ತುಂಬಾ ಕಷ್ಟಪಟ್ಟಿದ್ದಾರೆ ಹಾಕಿದ್ದಾರೆ.

ಇದನ್ನು ಓದಿ: ‘ಮಾರ್ಕ್’ ಚಿತ್ರೀಕರಣ ಮುಕ್ತಾಯ: ಡಿಸೆಂಬರ್.25ಕ್ಕೆ ಚಿತ್ರಮಂದಿರಗಳಿಗೆ ಎಂಟ್ರಿ

ಅವರದ್ದೇ ಊರಿನ ಕಥೆಯನ್ನು ಪರದೆ ಮೇಲೆ ತರುವುದು ಸುಲಭವಲ್ಲ. ಆದರೆ, ನಿರ್ದೇಶಕರು ಅದನ್ನು ಸಾಧಿಸಿದ್ದಾರೆ. ಚರಣ್ ರಾಜ್ ಸಂಗೀತ ಚೆನ್ನಾಗಿದೆ. ಈ ಚಿತ್ರ ದೊಡ್ಡ ರೀತಿ ಯಶಸ್ಸು ಕಾಣಲಿದೆ’ ಎಂದು ಭವಿಷ್ಯ ನುಡಿದರು. ಈ ಚಿತ್ರದ ಮೂಲಕ ‘ಗಿಣಿರಾಮ’ ಖ್ಯಾತಿ ರಿತ್ವಿಕ್‍ ಮಠದ್‍ ಹೀರೋ ಆಗುತ್ತಿದ್ದಾರೆ. ಅವರ ಜೀವನದಲ್ಲಿ ಒಬ್ಬ ಸ್ಟಾರ್‍ ನಟನನ್ನು ಹತ್ತಿರದಿಂದ ನೋಡಿದ್ದೆಂದರೆ ಅದು ಸುದೀಪ್‍ ಅಂತೆ.

‘ಸಿನಿಮಾ ಅಂದರೆ ಸುದೀಪ್‍ ಬಹಳ ಪ್ರೋತ್ಸಾಹ ಕೊಡುತ್ತಾರೆ. ಕರಾವಳಿ ಭಾಗದಲ್ಲಿ ನಡೆದ ಕಥೆಯನ್ನು ‘ಮಾರ್ನಮಿ’ ಸಿನಿಮಾ ಮೂಲಕ ಹೇಳಲು ಹೊರಟಿದ್ದೇವೆ’ ಎಂದರು. ‘ಮಾರ್ನಮಿ’ ಚಿತ್ರದಲ್ಲಿ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಜೊತೆಗೆ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ , ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರಾ ಶೆಟ್ಟಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ. ಚರಣ್ ರಾಜ್ ಸಂಗೀತ, ಶಿವಸೇನಾ ಛಾಯಾಗ್ರಹಣ,, ಸುಧೀ ಆರ್ಯನ್‍ ಕಥೆ ಚಿತ್ರಕ್ಕಿದ್ದು, ಗುಣಾಧ್ಯ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಶಿಲ್ಪಾ ನಿಶಾಂತ್ ಹಾಗೂ ನಿಶಾಂತ್ ಚಿತ್ರ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

4 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

5 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

6 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

7 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

12 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

14 hours ago