ಮನರಂಜನೆ

ಸೆ.2ರ ಬದಲು ಸೆ.1ರ ರಾತ್ರಿಯೇ ಅಭಿಮಾನಿಗಳೊಂದಿಗೆ ಸುದೀಪ್‍ ಹುಟ್ಟುಹಬ್ಬ

ಸುದೀಪ್‍ ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆ.02) ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ನಿರ್ಧರಿಸಿದ್ದರು. ಮನೆಯ ಬಳಿ ಜನ ದೊಡ್ಡ ಸಂಖ್ಯೆಯಲ್ಲಿ ಬರುವ ಕಾರಣ, ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾದ ಕಾರಣ ಅವರು ಜಯನಗರದ MES Groundsನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ಈ ಬಾರಿಯೂ ಮನೆಯ ಬದಲು ಬೇರೆ ಕಡೆ ಹುಟ್ಟುಹಬ್ಬವನ್ನು ಒಂದು ದಿನ ಮುಂಚಿತವಾಗಿ ಆಚರಿಸಿಕೊಳ್ಳುವುದಕ್ಕೆ ಅವರು ತೀರ್ಮಾನಿಸಿದ್ದಾರೆ. ಈ ಕುರಿತು ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ‘ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ, ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ. ನಿಮ್ಮ ಮೂಲಕವೇ ನನ್ನ ಹುಟ್ಟುಹಬ್ಬ ಹುಟ್ಟಬೇಕು. ಗಡಿಯಾರ 12 ಗಂಟೆ ಎಂದು ಸದ್ದು ಮಾಡುವಾಗ ನನಗೆ ನಿಮ್ಮ ಶುಭಾಶಯಗಳೇ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 2 ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿರುವ ಅವರು, ‘ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿದ ಮೇಲೂ ನೀವು ಮನೆ ಬಳಿ ಬಂದು ಕಾದರೆ ನನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ಸುದೀಪ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸೆಪ್ಟೆಂಬರ್‍.01ರ (ಸೋಮವಾರ) ರಾತ್ರಿ ಸುದೀಪ್‍ ಅಭಿಮಾನಿಗಳನ್ನು ಹೊಸಕೆರೆಹಳ್ಳಿಯ ಪಿ.ಇ.ಎಸ್‍ ಕಾಲೇಜ್‍ ಬಳಿ ಇರುವ ನಂದಿ ಲಿಂಕ್‍ ಗ್ರೌಂಡ್ಸ್ನಲ್ಲಿ ಆಚರಿಸಿಕೊಳ್ಳಲಿದ್ದಾರಂತೆ. ಈ ಕುರಿತು ಇನ್ನೊಂದೆರಡು ದಿನಗಳಲ್ಲಿ ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಇನ್ನೊಂದು ಪತ್ರ ಬರೆದು ಮಾಹಿತಿ ನೀಡಲಿದ್ದಾರಂತೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

43 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago