ಮನರಂಜನೆ

ಸೆ.2ರ ಬದಲು ಸೆ.1ರ ರಾತ್ರಿಯೇ ಅಭಿಮಾನಿಗಳೊಂದಿಗೆ ಸುದೀಪ್‍ ಹುಟ್ಟುಹಬ್ಬ

ಸುದೀಪ್‍ ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆ.02) ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ನಿರ್ಧರಿಸಿದ್ದರು. ಮನೆಯ ಬಳಿ ಜನ ದೊಡ್ಡ ಸಂಖ್ಯೆಯಲ್ಲಿ ಬರುವ ಕಾರಣ, ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾದ ಕಾರಣ ಅವರು ಜಯನಗರದ MES Groundsನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ಈ ಬಾರಿಯೂ ಮನೆಯ ಬದಲು ಬೇರೆ ಕಡೆ ಹುಟ್ಟುಹಬ್ಬವನ್ನು ಒಂದು ದಿನ ಮುಂಚಿತವಾಗಿ ಆಚರಿಸಿಕೊಳ್ಳುವುದಕ್ಕೆ ಅವರು ತೀರ್ಮಾನಿಸಿದ್ದಾರೆ. ಈ ಕುರಿತು ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ‘ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ, ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ. ನಿಮ್ಮ ಮೂಲಕವೇ ನನ್ನ ಹುಟ್ಟುಹಬ್ಬ ಹುಟ್ಟಬೇಕು. ಗಡಿಯಾರ 12 ಗಂಟೆ ಎಂದು ಸದ್ದು ಮಾಡುವಾಗ ನನಗೆ ನಿಮ್ಮ ಶುಭಾಶಯಗಳೇ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 2 ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿರುವ ಅವರು, ‘ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿದ ಮೇಲೂ ನೀವು ಮನೆ ಬಳಿ ಬಂದು ಕಾದರೆ ನನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ಸುದೀಪ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸೆಪ್ಟೆಂಬರ್‍.01ರ (ಸೋಮವಾರ) ರಾತ್ರಿ ಸುದೀಪ್‍ ಅಭಿಮಾನಿಗಳನ್ನು ಹೊಸಕೆರೆಹಳ್ಳಿಯ ಪಿ.ಇ.ಎಸ್‍ ಕಾಲೇಜ್‍ ಬಳಿ ಇರುವ ನಂದಿ ಲಿಂಕ್‍ ಗ್ರೌಂಡ್ಸ್ನಲ್ಲಿ ಆಚರಿಸಿಕೊಳ್ಳಲಿದ್ದಾರಂತೆ. ಈ ಕುರಿತು ಇನ್ನೊಂದೆರಡು ದಿನಗಳಲ್ಲಿ ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಇನ್ನೊಂದು ಪತ್ರ ಬರೆದು ಮಾಹಿತಿ ನೀಡಲಿದ್ದಾರಂತೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago