‘ಸಿಂಪಲ್’ ಸುನಿ ನಿರ್ದೇಶನದ ಹೊಸ ಚಿತ್ರ ‘ಗತವೈಭವ’ ಇದೇ ನವೆಂಬರ್ 14ರಂದು ಬಿಡುಗಡೆಯಾಗುತ್ತಿದೆ. ಇಲ್ಲಿಯವರೆಗೂ ಟೀಸರ್ ಮತ್ತು ಹಾಡುಗಳಿಂದಲೇ ಕುತೂಹಲ ಮೂಡಿಸಿದ್ದ ಸುನಿ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ಸುದೀಪ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕನ್ನಡ ಚಿತ್ರರಂಗದ ಬೆಸ್ಟ್ ನಿರ್ದೇಶಕರಲ್ಲಿ ಸುನಿ ಕೂಡ ಒಬ್ಬರು. ಅವರ ಜೊತೆಗೆ ಕೆಲಸ ಮಾಡುವ ಅವಕಾಶ ನನಗಿನ್ನೂ ಸಿಕ್ಕಿಲ್ಲ. ಒಂದಲ್ಲಾ ಒಂದು ದಿನ ಅವರ ಜೊತ ಕೆಲಸ ಮಾಡಬಹುದು. ಚಿತ್ರದ ಹೀರೋ ದುಷ್ಯಂತ್, ನಾಯಕಿ ಆಶಿಕಾ ರಂಗನಾಥ್ ಎಲ್ಲರೂ ಚೆನ್ನಾಗಿ ಕಾಣುತ್ತಿದ್ದಾರೆ. ಈ ಚಿತ್ರದ ಹೀರೋ ದುಷ್ಯಂತ್ ಅವರಿಗೆ ನಾನು ಟಿಪ್ಸ್ ಕೊಡುವುದು ಏನಿಲ್ಲ. ಅವರು ತುಂಬಾ ಚೆನ್ನಾಗಿ ಮಾತನಾಡಿದ್ದು ನೋಡಿದೆ. ನಾನು ಅವರಿಂದ ಕಲಿಯಬೇಕು. ದುಷ್ಯಂತ್ ಹೇಗೆ 10 ನಿಮಿಷಗಳ ಕಾಲ ಅಷ್ಟೊಂದು ಅಚ್ಚುಕಟ್ಟಾಗಿ ಎಲ್ಲರನ್ನ ತಮ್ಮ ಮಾತಿನಿಂದ ಹಿಡಿದಿಟ್ಟುಕೊಂಡರು ಅಂತ ಯೋಚಿಸುತ್ತಿದ್ದೆ. ಆಮೇಲೆ ಗೊತ್ತಾಯ್ತು ದುಷ್ಯಂತ್ ಅವರು ರಾಜಕಾರಣಿ ಮಗ ಅಂತ’ ಎಂದು ಹೇಳಿದರು.
ಇದನ್ನು ಓದಿ: ನವೆಂಬರ್.14ರಂದು ತೆರೆಮೇಲೆ ಫ್ಯಾಂಟಸಿ ‘ಗತವೈಭವ’
‘ಗತವೈಭವ’ ಚಿತ್ರದಲ್ಲಿ ಹೊಸ ಹೀರೋ ದುಷ್ಯಂತ್ ಜೊತೆಗೆ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ‘ಗತವೈಭವ’ ಸಾಕಷ್ಟು ರೀತಿಯಲ್ಲಿ ಸ್ಪೆಷಲ್ ಚಿತ್ರ ಎನ್ನುವ ಆಶಿಕಾ ತಾನು ಅತಿ ಹೆಚ್ಚು ದಿನಗಳ ಕಾಲ ಶೂಟ್ ಮಾಡಿದ ಸಿನಿಮಾ ಎನ್ನುತ್ತಾರೆ. ನಾಲ್ಕು ಸಿನಿಮಾ ನೋಡುವ ಅನುಭವ ಆಗುತ್ತದೆ ಎಂದ ಅವರು, ನಾಲ್ಕು ಕಥೆ, ನಾಲ್ಕು ಪಾತ್ರಗಳು ಚಿತ್ರದ ಹೈಲೈಟ್ ಎಂದರು. ಇನ್ನು, ದುಷ್ಯಂತ್ ಎಂಟು ವರ್ಷಗಳ ಪ್ರಯತ್ನದ ಬಳಿಕ ನಟನಾಗಿ ಪ್ರೇಕ್ಷಕರ ಮುಂದೆ ಬಂದು ನಿಂತಿರುವುದಾಗಿ ಹೇಳಿಕೊಂಡರು.
ಮಿಕ್ಕಂತೆ ಚಿತ್ರದಲ್ಲಿ ಸುಧಾ ಬೆಳವಾಡಿ, ಕಿಶನ್ ಬಿಳಗಲಿ, ಕೃಷ್ಣ ಹೆಬ್ಬಾಳೆ, ಕೃಷ್ಣ ಜೋರಾಪುರ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದು, ವಿಲೀಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಸೇರ್ವೇಗಾರ ಸಿಲ್ವರ್ ಸ್ಕ್ರೀನ್ಸ್ ಮತ್ತು ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸಿಂಪಲ್ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…